ಶಿವಮೊಗ್ಗ: ಊರಿನಲ್ಲಿ ಸ್ಮಶಾನ ಇಲ್ಲದ್ದರಿಂದ ಗ್ರಾಮ ಪಂಚಾಯತ್ ಆವರಣದಲ್ಲೇ ಶವ ಸಂಸ್ಕಾರ ನಡೆಸಲು ಗ್ರಾಮಸ್ಥರು ಸಿದ್ಧತೆ ಮಾಡಿಕೊಂಡ ಅಪರೂಪದ ಪ್ರಕರಣವೊಂದು ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ.
ಶಿವಮೊಗ್ಗ ತಾಲೂಕಿನ ಸಂತೆಕಡೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಇಂದು ಸಂತೆಕಡೂರು ಎ.ಕೆ. ಕಾಲನಿಯಲ್ಲಿ ಮೃತಪಟ್ಟಿರುವ ವೃದ್ಧೆ ರಂಗಮ್ಮ ಎಂಬವರ ಶವಸಂಸ್ಕಾರಕ್ಕೆ ಗ್ರಾಮ ಪಂಚಾಯತ್ ಆವರಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ.
ಈ ಹಿಂದೆ ಸಂತೆಕಡೂರು ಗ್ರಾಮದ ಸ್ಮಶಾನಕ್ಕೆಂದು ಮೂರು ಎಕರೆ ಜಾಗ ಮಂಜೂರಾಗಿತ್ತು. ಆದರೆ ಆ ಜಾಗದಲ್ಲಿ ಕೆಲವರು ಮನೆ ನಿರ್ಮಿಸಿಕೊಂಡಿದ್ದಾರೆ. ಅಲ್ಲಿನ ಉಳಿದ ಜಾಗವನ್ನು ಕಳೆದ ವಾರ ಸರ್ವೇ ಮಾಡಲು ಹೋದ ಅಧಿಕಾರಿಗಳನ್ನು ಅಲ್ಲಿ ಮನೆಯವರು ಪ್ರತಿಭಟನೆ ನಡೆಸಿ ವಾಪಸ್ ಕಳುಹಿಸಿದ್ದರು. ಹೀಗಾಗಿ ಈ ಸ್ಮಶಾನದ ಜಾಗ ವಿವಾದಾತ್ಮಕವಾಗಿ ಉಳಿದುಕೊಂಡಿದೆ.
ಸರ್ಕಾರದಿಂದ ಮಂಜೂರಾದ ಈ ಸ್ಮಶಾನದ ಜಾಗಕ್ಕೆ ಇಂದು ರಂಗಮ್ಮ ಅವರ ಶವವನ್ನು ಕುಟುಂಬಸ್ಥರು ಶವಸಂಸ್ಕಾರಕ್ಕೆಂದು ಕೊಂಡೊಯ್ದಿದ್ದರು. ಆದರೆ ಆ ಜಾಗದಲ್ಲಿ ಶವಸಂಸ್ಕಾರಕ್ಕೆ ಅಲ್ಲಿನ ಕೆಲವರು ಅವಕಾಶ ನೀಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಗ್ರಾಮಪಂಚಾಯತ್ ಆವರಣದ ಒಳಗೆ ಗುಂಡಿ ತೆಗೆದು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ವಿಷಯ ಕೇಳಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಆದಾಯ ತೆರಿಗೆ ಪಾವತಿಸುತ್ತಿದ್ದರೆ ನಿಮಗೆ ಈ ಯೋಜನೆಯ ಪ್ರಯೋಜನ ಸಿಗಲ್ಲ; ಹೊಸ ಆದೇಶ ಎಂದಿನಿಂದ ಜಾರಿ?
Fact Check: ರಾಷ್ಟ್ರಧ್ವಜ ಖರೀದಿಸದಿದ್ದರೆ ರೇಷನ್ ಕೊಡಲ್ವಾ?; ಇಲ್ಲಿದೆ ಸತ್ಯಾಂಶ..
ಸರ್ಕಾರಿ ಕಾರ್ಯಕ್ರಮದಿಂದ ಎದ್ದು ಹೊರಟ ಜನರ ಸಮಯಪ್ರಜ್ಞೆಗೆ ಸಿಎಂ ಮೆಚ್ಚುಗೆ!