More

    ವಿಜಯಪುರ | ಮುಂಜಾಗ್ರತೆಗಾಗಿ ತರಲಾಗುತ್ತಿದ್ದ ಮಂತಯಂತ್ರಗಳನ್ನು ಒಡೆದು ಹಾಕಿದ ಗ್ರಾಮಸ್ಥರು; ಅಧಿಕಾರಿಗಳಿಗೆ ಥಳಿತ, ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ

    ವಿಜಯಪುರ: ಮುಂಜಾಗ್ರತೆಗಾಗಿ ತರಿಸಲಾಗಿದ್ದ ಹೆಚ್ಚುವರಿ ಮತಯಂತ್ರಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ. ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

    ಗೊಂದಲಗೊಂಡ ಜನರು

    ಮತಯಂತ್ರ ಕೆಟ್ಟು ಹೋದಲ್ಲಿ ಬಳಕೆ ಮಾಡಲು ಎಂದು ಹೆಚ್ಚುವರಿಯಾಗಿ ಇವಿಎಂ ಯಂತ್ರ ಹಾಗೂ ವಿವಿಪ್ಯಾಟ್ ‌ಮಶೀನ್‌ಗಳನ್ನು ತರಲಾಗುತ್ತಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ಕರ್ತವ್ಯ ನಿರತ ಸಿಬ್ಬಂದಿಗಳನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಸರಿಯಾಗಿ ಉತ್ತರಿಸದೇ ಇದ್ದಾಗ ಅರ್ಧಕ್ಕೆ ಮತದಾನ ಸ್ಥಗಿತಗೊಳಿಸಲಾಗಿದ ಎಂದು ತಪ್ಪು ಭಾವಿಸಿದ ಜನರು ಮತಯಂತ್ರವನ್ನು ಪುಡಿ ಮಾಡಿದ್ದಾರೆ.

    ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ

    ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ಮತಯಂತ್ರಗಳನ್ನು ತೆಗೆದುಕೊಂಡು ಬರುತ್ತಿದ್ದಾಗ ಈ ಅಚಾತುರ್ಯ ಸಂಭವಿಸಿದೆ. ಅಲ್ಲದೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗಳಿಗೂ ಥಳಿಸಿದ್ದು, ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts