More

    ವಿನಯ್​ ಕುಲಕರ್ಣಿ ಮಾವ ನಿಧನ, ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು 4 ತಾಸು ಅವಕಾಶ ​

    ಧಾರವಾಡ: ಮಾಜಿ ಸಚಿವ ವಿನಯ್​ ಕುಲಕರ್ಣಿ ಅವರ ಮಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್​ ಕುಲಕರ್ಣಿಗೆ ಮಾವನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ನಾಲ್ಕು ಗಂಟೆ ಕಾಲಾವಕಾಶ ನೀಡಿದೆ.

    ವಿನಯ್​ ಕುಲಕರ್ಣಿ ಅವರ ಪತ್ನಿಯ ತಂದೆ ಗಂಗಪ್ಪ ಶಿಂತ್ರೆ ಮೃತರು. ಇವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಜೈಲಿನಿಂದ ಮಾಜಿ ಸಚಿವರನ್ನು ಪೊಲೀಸರು ಕರೆದೊಯ್ಯಲಿದ್ದಾರೆ. ಇದನ್ನೂ ಓದಿರಿ ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕುಮಾರಸ್ವಾಮಿ!

    2016ರ ಜೂನ್ 15ರಂದು ಕೊಲೆಯಾದ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೇಸ್​ನಲ್ಲಿ ವಿನಯ್​ ಕುಲಕರ್ಣಿಯನ್ನು ಕಳೆದ ನವೆಂಬರ್​ನಲ್ಲೇ ಸಿಬಿಐ ಬಂಧಿಸಿತ್ತು. ಈ ಕೊಲೆ ಕೇಸ್​ನಲ್ಲಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪವನ್ನು ವಿನಯ್​ ಕುಲಕರ್ಣಿ ಎದುರಿಸುತ್ತಿದ್ದಾರೆ.

    ಯೋಗೀಶ್​ಗೌಡ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದ ವಿನಯ್​ ಕುಲಕರ್ಣಿ ರಹಸ್ಯ ಇಲ್ಲಿದೆ

    ಧಾರವಾಡದಲ್ಲಿ ಭೀಕರ ಅಪಘಾತ: ಸಾವಿಗೂ ಮುನ್ನ ಬಾಲ್ಯ ಸ್ನೇಹಿತೆಯರ ಸುಂದರ ಕ್ಷಣಗಳ ಎಕ್ಸ್​ಕ್ಲೂಸಿವ್​ ವಿಡಿಯೋ ಇಲ್ಲಿದೆ​

    VIDEO| ಇನ್ನೊಂದು ಆರು ತಿಂಗಳು ಸರ್ಕಾರ ಇದ್ದಿದ್ರೆ.. ಎಲ್ಲವೂ ಮುಗಿದು ಹೋಗ್ತಿತ್ತು ತಾಯಿ… ಎನ್ನುತ್ತ ಕೈಮುಗಿದ ಎಚ್​ಡಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts