ನವದೆಹಲಿ: ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ಗಲ್ಲಿಗೇರಿಸಲು ಫೆ.1ರಂದು ದಿನ ಫಿಕ್ಸ್ ಮಾಡಲಾಗಿದೆ. ಆದರೆ ಸದ್ಯದ ಬೆಳವಣಿಗೆಳನ್ನು ನೋಡಿದರೆ ಶಿಕ್ಷೆಯ ದಿನ ಮತ್ತೆ ಮುಂದೆ ಹೋಗಬಹುದಾ ಎಂಬ ಅನುಮಾನ ಕಾಡುತ್ತಿದೆ.
ಇಂದು ಬೆಳಗ್ಗೆಯಷ್ಟೇ ಅಪರಾಧಿಗಳಲ್ಲೊಬ್ಬನಾದ ಅಕ್ಷಯ್ ಠಾಕೂರ್ ಸುಪ್ರೀಂಕೋರ್ಟ್ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ ಎಂದು ತಿಹಾರ್
ಅಪರಾಧಿ ಅಕ್ಷಯ್ ಠಾಕೂರ್ ಮಂಗಳವಾರ ಸುಪ್ರೀಂಕೋರ್ಟ್ನಲ್ಲಿ ಕ್ಯುರೇಟಿವ್ ಅರ್ಜಿ ದಾಖಲಿಸಿರುವುದಾಗಿ ತಿಹಾರ್ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅದರ ಬೆನ್ನಲ್ಲೇ ಮತ್ತೋರ್ವ ಅಪರಾಧಿ ವಿನಯ್ ಕುಮಾರ್ ಶರ್ಮಾ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದಾನೆ. ಮರಣದಂಡನೆ ರದ್ದುಗೊಳಿಸಿ ಜೀವಾವಧಿ ಶಿಕ್ಷೆ ನೀಡಿ ಎಂದು ಮನವಿ ಮಾಡಿದ್ದಾನೆ.
2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಅಪರಾಧಿಗಳಾದ ವಿನಯ್ಕುಮಾರ್ ಶರ್ಮಾ, ಮುಕೇಶ್ ಕುಮಾರ್ ಸಿಂಗ್, ಪವನ್ ಗುಪ್ತಾ ಮತ್ತು ಅಕ್ಷಯ್ ಫೆ.1ರಂದು ನೇಣುಗಂಬಕ್ಕೆ ಏರಬೇಕು. ಆದರೆ ದಿನಕ್ಕೊಬ್ಬರು ಒಂದೊಂದು ಅರ್ಜಿ ಸಲ್ಲಿಸುತ್ತ ಶಿಕ್ಷೆಯಿಂದ ಪಾರಾಗಲು ಯತ್ನಿಸುತ್ತಿದ್ದಾರೆ. (ಏಜೆನ್ಸೀಸ್)