ಕೆ.ಜಿ.ಗಟ್ಟಲೆ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವುದು ಈ ಕುಟುಂಬದ ಸಂಪ್ರದಾಯವಂತೆ!

blank

ಆಂಧ್ರಪ್ರದೇಶ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕುಟುಂಬವೊಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಧರಿಸಿ ಬಂದಿದೆ. ಇವರ ಮೈಮೇಲಿದ್ದ ಬಂಗಾರ ನೋಡಿದ ತಿರುಮಲ ಬೆಟ್ಟದಲ್ಲಿದ್ದ ಭಕ್ತರು ಒಂದು ಕ್ಷಣ ಆಶ್ಚರ್ಯಚಕಿತರಾಗಿದ್ದಾರೆ.

ಜೂನ್​ 3ರಂದು ಮಹಾರಾಷ್ಟ್ರದ ರತ್ಲಾಮ್​ನಿಂದ ತಿರುಪತಿ ದೇವರ ದರ್ಶನಕ್ಕೆ ಸುಭಾಷ್ ಚಂದ್ರ ಮತ್ತು ಸೋನಿ ಕುಟುಂಬ ಬಂದಿತ್ತು. ಇವರು ಧರಿಸಿದ್ದ ಚಿನ್ನದ ಆಭರಣಗಳ ಮೇಲೆ ದೊಡ್ಡ ಬಿಲ್ಲುಗಳೊಂದಿಗೆ ವೆಂಕಟೇಶ್ವರ ಮತ್ತು ಪದ್ಮಾವತಿ ದೇವಿಯ ವಿಗ್ರಹಗಳಿದ್ದು, ತಿರುಮಲ ಬೆಟ್ಟದಲ್ಲಿದ್ದ ಭಕ್ತರ ಆಕರ್ಷಣೆಗೆ ಕಾರಣವಾಗಿತ್ತು.

ಇದನ್ನೂ ಓದಿ: ‘ಮೊನಾಲಿಸಾ’ ವರ್ಣಚಿತ್ರದಂತೆ ಕಾಣ್ತಿದ್ದಾರಾ ಕಂಗನಾ ರಣಾವತ್? ಇಲ್ಲಿವೆ ನೋಡಿ ಫೋಟೋಸ್…

ಮೈತುಂಬಾ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಬಂಗಾರದ ಒಡವೆಗಳಿಂದ ಮಿಂಚುತ್ತಿದ್ದ ಕುಟುಂಬವನ್ನು ಭಕ್ತರು ಕುತೂಲಹದಿಂದ ವೀಕ್ಷಿಸುತ್ತಿದ್ದರು. ಕೆಲವರು ತಮ್ಮ ಮೊಬೈಲ್‌ನಲ್ಲಿ ಫೋಟೋ ಸೆರೆ ಹಿಡಿದಿದ್ದಾರೆ. ಸದ್ಯ ಈ ಫೋಟೋಗಳು ಇಂಟರ್ನೆಟ್​ನಲ್ಲಿ ವೈರಲ್ ಆಗುತ್ತಿವೆ.

ಇದನ್ನೂ ಓದಿ: VIDEO | ಸಿನಿಮಾ ಸ್ಟೈಲ್​ನಲ್ಲಿ ಮದುವೆ ಹೆಣ್ಣನ್ನು ಬೈಕ್​ನಲ್ಲಿ ಹೊತ್ತೊಯ್ದ ಕುಟುಂಬಸ್ಥರು! ಯಾಕೆ ಅನ್ನೋದೇ ಕುತೂಹಲ

ಈ ಬಗ್ಗೆ ಮಹಾರಾಷ್ಟ್ರದಿಂದ ಬಂದಿದ್ದ ಕುಟುಂಬ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ‘ಪ್ರತಿ ವರ್ಷ ವೆಂಕಟೇಶ್ವರನ ವಿಗ್ರಹಗಳಿರುವ ಚಿನ್ನದ ಆಭರಣ ಧರಿಸಿ ತಿರುಮಲಕ್ಕೆ ಬರುವುದು ವಾಡಿಕೆ. ಪೂರ್ವಜರ ಕಾಲದಿಂದಲೂ ತಿರುಪತಿ ವೆಂಕಟೇಶ್ವರನನ್ನು ಮನೆ ದೇವರಾಗಿ ಪೂಜಿಸುತ್ತಾ ಬಂದಿದ್ದೇವೆ. ವೆಂಕಟೇಶ್ವರ ಮತ್ತು ಪದ್ಮಾವತಿ ದೇವಿಯ ವಿಗ್ರಹಗಳಿಂದ ತಯಾರಿಸಿದ ಚಿನ್ನಾಭರಣ ಧರಿಸಿ ತಿರುಮಲ ದೇವರ ದರ್ಶನ ಮಾಡುವುದು ಪೂರ್ವಜರಿಂದ ಬಂದ ಸಂಪ್ರದಾಯ ಎಂದು ಹೇಳಿಕೊಂಡಿದ್ದಾರೆ. (ಏಜೆನ್ಸೀಸ್)

Share This Article

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…

ಕಣ್ಣಿನಪೊರೆ ಸಮಸ್ಯೆಗೆ ಪರಿಹಾರ ಏನೆಂದು ಆಲೋಚಿಸುತ್ತಿದ್ದೀರಾ?; ಇಲ್ಲಿದೆ ಸೂಕ್ತ ಮನೆಮದ್ದಿನ ಮಾಹಿತಿ | Health Tips

ಪ್ರಸ್ತುತ ಕಾರ್ಯನಿರತ ಜೀವನ ಮತ್ತು ಕಳಪೆ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದರಲ್ಲಿನ ಪ್ರಮುಖ ಸಮಸ್ಯೆಗಳಲ್ಲಿ…