Viral Video| ನಿಧಾನಕ್ಕೆ ಹೋಗಪ್ಪ ಎಂದಿದ್ದೆ ತಪ್ಪಾಯ್ತ; ವೃದ್ಧನನ್ನು ಒಂದೇ ಏಟಿಗೆ ಹೊಡೆದು ಕೊಂದ ಬೈಕ್​ ಸವಾರ

Road Rage

ಹೈದರಾಬಾದ್​: ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ರೋಡ್​ ರೇಜ್​ (Road Rage) ಪ್ರಕರಣಗಳು ಹೆಚ್ಚಾಗುತ್ತಿದ್ದು, ಈಚೆಗೆ ಮುಂಬೈನಲ್ಲಿ ತನ್ನ ತಪ್ಪಿಲ್ಲದಿದ್ದರೂ ವ್ಯಕ್ತಿಯೋರ್ವನನ್ನು ಸುಖಾಸುಮ್ಮನೆ ಥಳಿಸಿ ಕೊಲ್ಲಲಾಗಿತ್ತು. ಈ ಪ್ರಕರಣ ದೇಶಾದ್ಯಂತ ವ್ಯಾಪಕ ಸದ್ದು ಮಾಡಿತ್ತು. ಇದೀಗ ಈ ಪ್ರಕರಣ ಮಾಸುವ ಮುನ್ನವೇ ಹೈದರಾಬಾದಿನಲ್ಲಿ (Hydrebad) ಇದೇ ರೀತಿಯ ಘಟನೆಯೊಂದು ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಹೈದರಾಬಾದ್​ನ (Hydrebad) ಅಲ್ವಾಲ್​ (Alwal) ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರಸ್ತೆ ದಾಟುತ್ತಿದ್ದ ಹಿರಿಯ ವ್ಯಕ್ತಿಯೊಬ್ಬರು ಬೈಕ್​ ಸವಾರನಿಗೆ ನಿಧಾನಕ್ಕೆ ಹೋಗುವಂತೆ ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಬೈಕ್​ ಸವಾರ (Bike Rider) ಒಂದೇ ಏಟಿಗೆ ವೃದ್ಧನನ್ನು ಕೊಂದು ಹಾಕಿದ್ದು, ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video)​ ಆಗಿದೆ.

ಇದನ್ನೂ ಓದಿ: Bigg Boss ಪ್ರಸಾರ ನಿಲ್ಲಿಸುವಂತೆ ತುರ್ತು ನೋಟಿಸ್​ ಜಾರಿ; ಶೀಘ್ರದಲ್ಲೇ ಶೋ ಅಂತ್ಯ

ವೈರಲ್​ ಆಗಿರುವ ವಿಡಿಯೋ (Viral Video) ನೋಡುವುದಾದರೆ ಅಲ್ವಾಲ್​ ಪೊಲೀಸ್​ ಠಾಣಾ ವ್ಯಾಪ್ತಿಯ ಜನನಿಬಿಡ ರಸ್ತೆಯೊಂದರಲ್ಲಿ ದಾಟಲು ಪರದಾಡುತ್ತಿರುತ್ತಾರೆ. ಈ ವೇಳೆ ವೃದ್ಧ (Senior Citizen) ಹೇಗೋ ಕಷ್ಟಪಟ್ಟು ರಸ್ತೆ ದಾಟಿದ್ದು, ವೇಗವಾಗಿ ಬಂದ ಬೈಕ್ ಸವಾರನೋರ್ವ​ (Bike Rider) ಅವರಿಗೆ ಡಿಕ್ಕಿ ಹೊಡೆಯುವದರಿಂದ ತಪ್ಪಿಸುತ್ತಾನೆ. ಈ ವೇಳೆ ವೃದ್ಧ ಆತನಿಗೆ ನಿಧಾನಕ್ಕೆ ಬೈಕ್​ ಚಲಾಯಿಸುವಂತೆ ಹೇಳುತ್ತಾರೆ. ಇದರಿಂದ ಸಿಟ್ಟಿಗೆದ್ದ ಬೈಕ್​ ಸವಾರ ಗಾಡಿಯನ್ನು ರಸ್ತೆಗೆ ಅಡ್ಡಾಲಾಗಿ ನಿಲ್ಲಿಸಿ ಬಂದು ವೃದ್ಧನನ್ನು (Senior Citizen) ತಳ್ಳಿ ಆ ನಂತರ ಒಂದು ಏಟು ಹೊಡೆಯುತ್ತಾನೆ. ಸವಾರನ ಏಟಿಗೆ ವೃದ್ಧ ಸ್ಥಳದಲ್ಲೇ ಕುಸಿದು ಬಿದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುತ್ತಾರೆ. ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಗುರುವಾರ (ಅಕ್ಟೋಬರ್​ 17) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು (Senior Police Officer), ಮೃತರನ್ನುಆಂಜನೇಯುಲು ಎಂದು ಗುರುತಿಸಲಾಗಿದ್ದು, ಪ್ರಕರಣ ಸಂಬಂಧ ಬೈಕ್​ ಸವಾರನನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ವಿಚಾರಣೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…