VEDIO | ಕರೊನಾ ವೈರಸ್​ ಸೋಂಕು: ಕೊಡಗಿನ ವಿರಾಜಪೇಟೆಗೆ ದಿಗ್ಬಂಧನ

blank

ಮಡಿಕೇರಿ: ಕೊಡಗು ಮೂಲದ ಕರೊನಾ ವೈರಸ್​ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ 300 ಮಂದಿಯಲ್ಲಿ ಕೇವಲ 5 ಮಂದಿ ಮಾತ್ರ ಸ್ವಯಂ ಪ್ರೇರಿತವಾಗಿ ತಪಾಸಣೆಗೆ ಒಳಗಾಗಿದ್ದಾರೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್​ ಕಣ್ಮಣಿ ಜಾಯ್​ ತಿಳಿಸಿದ್ದಾರೆ.

ವಿದೇಶದಿಂದ ಬಂದ ಆತ ಬೆಂಗಳೂರಿನ ಬ್ಯಾಟರಾಯನಪುರದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ರಾಜಹಂಸ ಬಸ್​ನಲ್ಲಿ ಕೊಡಗಿಗೆ ಆಗಮಿಸಿದ್ದ. ಆ ಬಸ್​ನಲ್ಲಿ 32 ಮಂದಿ ಪ್ರಯಾಣಿಕರು ಇದ್ದರು. ಅಲ್ಲದೆ ಬಸ್​ ಮದ್ದೂರಿನಲ್ಲಿ ಹೋಟೆಲ್​ನಲ್ಲಿ ನಿಲುಗಡೆ ಮಾಡಿತ್ತು. ಹೀಗಾಗಿ ಆತ ಅಂದಾಜು 300 ಮಂದಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದ. ಇವರಲ್ಲಿ ಕೇವಲ 5 ಮಂದಿ ಮಾತ್ರ ತಪಾಸಣೆಗೆ ಒಳಗಾಗಿದ್ದಾರೆ. ಇವರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪುಣೆಗೆ ಪರೀಕ್ಷೆಗೆ ಕಳುಹಿಸಲಾಗಿದೆ ಶೀಘ್ರದಲ್ಲೇ ವರದಿ ಬರಲಿದೆ ಎಂದರು.

ವಿರಾಜಪೇಟೆಯ ಮೂವರು ಶಿಕ್ಷಕರು ಸಂಪರ್ಕಕ್ಕೆ ಬಂದಿದ್ದರು: ಸೋಂಕಿತ ವ್ಯಕ್ತಿಯೊಂದಿಗೆ ಬೆಂಗಳೂರಿನಿಂದ ಮಡಿಕೇರಿಗೆ ಬಂದ ರಾಜಹಂಸ ಬಸ್​ನಲ್ಲಿ ವಿರಾಜಪೇಟೆ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಇದ್ದರು. ಅವರು ಬಸ್​ ಇಳಿದು ನೇರವಾಗಿ ಶಾಲೆಗೆ ತೆರಳಿದ್ದರು. ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ವಿರಾಜಪೇಟೆಯಲ್ಲಿ ಶಿಕ್ಷಕರೊಂದಿಗೆ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವ ಕೆಲಸದಲ್ಲಿ ತೊಡಗಿದ್ದಾರೆ. ತಹಸೀಲ್ದಾರ್​ ವಿರಾಜಪೇಟೆಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ವಿರಾಜಪೇಟೆಯಲ್ಲಿ 75 ಮನೆಗಳು ಇದ್ದು ಯಾರು ಕೂಡ ಹೊರಗೆ ಹೋಗದಂತೆ ಸೂಚಿಸಲಾಗಿದೆ. ಅಂಗಡಿಗಳನ್ನು ಮುಚ್ಚಲಾಗಿದೆ. (ದಿಗ್ವಿಜಯ ನ್ಯೂಸ್​)

https://www.vijayavani.net/coronastopkarona-corona-marriage-at-chitradurga-molkalmuru/

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…