ಬೆಂಗಳೂರು: ಡಾ. ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ 500 ಗಿಡಗಳನ್ನು ನೆಡುವುದಾಗಿ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಹೇಳಿಕೊಂಡಿದ್ದರು. ಅದರಂತೆ, ಶುಕ್ರವಾರ ಶ್ರೀನಿವಾಸ್ ಮತ್ತು ಸಂಗಡಿಗರು, 500 ಗಿಡಗಳನ್ನು ನೆಟ್ಟು ಸಾರ್ಥಕ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ: ಕಾಮಿಡಿ ಕಿಲಾಡಿಗಳು ಮತ್ತೆ ಬರ್ತಿದ್ದಾರೆ
ಈ ಬಾರಿ ವಿಷ್ಣುವರ್ಧನ್ ಅವರ 70ನೇ ಹುಟ್ಟುಹಬ್ಬದ ಅಂಗವಾಗಿ ರಾಜ್ಯಾದ್ಯಂತ 70 ಸಾವಿರ ಗಿಡಗಳನ್ನು ನೆಡಬೇಕು ಎಂದು ಡಾ.ವಿಷ್ಣು ಸೇನಾ ಸಮತಿ ಯೋಜನೆಯೊಂದನ್ನು ಹಾಕಿಕೊಂಡಿದೆ. ಈಗಾಗಲೇ ಈ ನಿಟ್ಟಿನಲ್ಲಿ ಸಂಘದ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅಭಿಮಾನಿಗಳಿಗೆ ಕರೆ ನೀಡಿದ್ದು, ರಾಜ್ಯದ್ಯಂತ 12 ಸಾವಿರ ಗಿಡಗಳನ್ನು ನೆಡಲಾಗಿದೆ.
ಇನ್ನು ಸೆಪ್ಟೆಂಬರ್ 11ರಂದು ಬೆಂಗಳೂರು ವಿಶ್ವವಿದ್ಯಾಲಯದ ಆವರಣದ ಸುಮಾರು ಒಂದೂವರೆ ಎಕರೆ ಪ್ರದೇಶದಲ್ಲಿ ಅವರು 500 ಗಿಡಗಳನ್ನು ನೆಡುವುದಾಗಿ ಹೇಳಿದ್ದರು. ಇದಕ್ಕಾಗಿ ಅಲ್ಲಿ ಗುಂಡಿಗಳನ್ನು ಸಹ ತೆಗೆಯಲಾಗಿತ್ತು. ಶುಕ್ರವಾರ ವಿಶ್ವವಿದ್ಯಾಲಯದ ಆವರಕ್ಕೆ ಹೋದ ಶ್ರೀನಿವಾಸ್ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು ಹೋಗಿ ಗಿಡ ನೆಟ್ಟು ಬಂದಿದ್ದಾರೆ. ಮುಂದಿನ ಶುಕ್ರವಾರ, ಅಂದರೆ ಸೆಪ್ಟೆಂಬರ್ 18ರಂದು, ಅಲ್ಲೇ ಇನ್ನೂ 200 ಗಿಡಗಳನ್ನು ನೆಡಲಾಗುವುದು ಎಂದು ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ.
ಇದನ್ನೂ ಓದಿ: ನಮ್ ಲೈಫೇ ಬರ್ನ್ ಆಗ್ಹೋಯ್ತು ಎಂದು ಅಲವತ್ತುಕೊಂಡ ರಾಗಿಣಿ: ವಿಡಿಯೋ ವೈರಲ್
ಇನ್ನು ವಿಷ್ಣುವರ್ಧನ್ ಅವರ ಹುಟ್ಟುಹಬ್ಬಕ್ಕೆ ಕೇವಲ ಆರು ದಿನಗಳು ಮಾತ್ರ ಬಾಕಿ ಇದ್ದು, ವಿಷ್ಣುವರ್ಧನ್ ಅವರ ಅಭಿಮಾನಿಗಳಾಗಿ ಅವರ ಅಭಿಮಾನಕ್ಕೆ ಕನಿಷ್ಠ 20 ಸಾವಿರ ಸಸಿಗಳನ್ನಾದರೂ ನೆಟ್ಟರೆ, ಶ್ರಮ ಸಾರ್ಥಕ ಎಂದು ಶ್ರೀನಿವಾಸ್ ಹೇಳಿದ್ದಾರೆ.
ರಾಕುಲ್ ಸೇರಿ ಮೂವರು ನಟಿಯರ ಹೆಸರು ಹೇಳಿದ ರಿಯಾ: ಎನ್ಸಿಬಿ ಪಟ್ಟಿಯಲ್ಲಿದೆ ಸ್ಪೋಟಕ ಮಾಹಿತಿ!