ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು, ಸೆ.15ರಂದು ಆನ್ಲೈನ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ: ನಿಮ್ಮ ದೇಹ ನಿಮ್ಮದಲ್ಲ, ನಿಮ್ಮ ಅಪ್ಪ-ಅಮ್ಮ ಕೊಟ್ಟಿರುವ ಭಿಕ್ಷೆ… ಹೀಗಂತ ನಟ ಯಶ್ ಹೇಳಿದ್ದೇಕೆ?
ಬುಧವಾರ ಬೆಳಿಗ್ಗೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ನಟ ಅನಿರುದ್ಧ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ, ಇದೇ ತಿಂಗಳು 15ರಂದು ನಡೆಯಲಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಸಲ್ಲಿಸಿದ್ದಾರೆ.
ಈ ಕಾರ್ಯಕ್ರಮವು ಬಹಳ ಸರಳವಾಗಿ ನಡೆಯಲಿದ್ದು, ವಿಷ್ಣು ಅವ ಅಭಿಮಾನಿಗಳು ತಮ್ಮ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬರಬಾರದು ಮತ್ತು ಗುಂಪುಗೂಡಬಾರದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ನಾಳೆ ಸರ್ಪ್ರೈಸ್ನೊಂದಿಗೆ ಭೇಟಿಯಾಗ್ತಾರಂತೆ ರಿಷಭ್ …
ಇನ್ನು, ಇದುವರೆಗೂ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದ ಭೂವಿವಾದಗಳೆಲ್ಲಾ ಬಗೆಹರಿದಿದೆ ಎಂದು ಅವರು ಹೇಳಿದ್ದಾರೆ. ಜನರ ಪ್ರೀತಿ ಮತ್ತು ಅಭಿಮಾನದಿಂದ ಸ್ಮಾರಕ ನಿರ್ಮಾಣಕ್ಕೆ ಚಾಲನೆ ಸಿಗುತ್ತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.