More

    ಧಾರಾಕಾರ ಮಳೆಗೆ ವಿಟ್ಲ ಹೋಬಳಿಯ ಹಲವು ಕಡೆ ಹಾನಿ

    ವಿಟ್ಲ: ಸುರಿಯುತ್ತಿರುವ ಧಾರಾಕಾರ ಮಳೆಗೆ ವಿಟ್ಲ ಹೋಬಳಿ ವ್ಯಾಪ್ತಿಯ ಹಲವು ಕಡೆ ಹಾನಿ ಸಂಭವಿಸಿದೆ. ಬೋಳಂತೂರು ಗ್ರಾಮದ ಕೊಕ್ಕಪುಣಿಯಲ್ಲಿ ಗಾಳಿ ಮಳೆಗೆ ನೇಮಕ್ಕು ಅವರ ಮನೆಯ ಹಿಂಭಾಗದ ಧರೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಪಂಚಾಯಿತಿ ಸದಸ್ಯ ಯಾಕುಬು ಡಿ. ಮತ್ತು ಗ್ರಾಮಕರಣಿಕ ಕರಿಬಸಪ್ಪ ಆಗಮಿಸಿ ಪರಿಶೀಲಿಸಿದರು.

    ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ನಿವಾಸಿ ಸುನೀಲ್ ಪಾಯಸ್ ಅವರ ಮನೆ ಪಕ್ಕದಲ್ಲಿ ಗುಡ್ಡ ಕುಸಿತವಾಗಿ ಕೃಷಿ ತೋಟದಲ್ಲಿದ್ದ ಹಲವು ಅಡಕೆ ಮರಗಳಿಗೆ ಹಾನಿಯಾಗಿದೆ.

    ಬೋಳಂತೂರು ಗ್ರಾಮದ ಅಬ್ದುಲ್ ಖಾದ್ರಿ ಅವರ ಮನೆಯ ಪಕ್ಕದ ತಡೆಗೋಡೆ ಕುಸಿದಿದೆ. ಚೆನ್ನಪ್ಪ ಪೂಜಾರಿ ಅವರ ಮನೆಯ ಹಿಂಭಾಗದಲ್ಲಿರುವ ತೋಡಿಗೆ ಕಟ್ಟಲಾದ ತಡೆಗೋಡೆ ಕುಸಿದಿದೆ. ಮನೆ ಅಪಾಯದಲ್ಲಿದ್ದು, ಮನೆಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

    ಗುಂಡಿಮಜಲು ವಿಶ್ವನಾಥ ಭಟ್ ಅವರ ಮನೆಯ ಪಕ್ಕದ ಗುಡ್ಡ ಕುಸಿದಿದೆ. ಬೋಳಂತೂರು ಗುತ್ತು ಸೀತಾರಾಮ ಅವರ ಮನೆಯ ಪಕ್ಕದ ತೋಡಿನ ತಡೆಗೋಡೆ ಕುಸಿದು ಅಪಾಯದಲ್ಲಿದೆ. ವೀರಕಂಬ- ಬೋಳಂತೂರು ಸಂಪರ್ಕಿಸುವ ರಸ್ತೆಯ ತಡೆಗೋಡೆ ತೋಡಿನ ಪಾಲಾಗಿದ್ದು, ರಸ್ತೆ ಸಂಪೂರ್ಣವಾಗಿ ಕುಸಿಯುವ ಭೀತಿಯಲ್ಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts