More

    ಎಸ್ ಎಸ್ ಎಲ್ ಸಿ ಓದುತ್ತಿರುವ ವಿದ್ಯಾರ್ಥಿ ಆತ್ಮಹತ್ಯೆ

    ಪುತ್ತೂರು: ಎಸ್ ಎಸ್ ಎಲ್ ಸಿ ಓದುತ್ತಿರುವ ವಿದ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಜ . 4 ರಂದು ನಡೆದಿದೆ.
    ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ ಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಮೃತಪಟ್ಟ ಅಪ್ರಾಪ್ತ ಬಾಲಕ.
    ಕಳೆದ ರಾತ್ರಿ ತನ್ನ ಕೋಣೆಯಲ್ಲಿ ಮಲಗಿದ್ದ ಈತ ಬೆಳಿಗ್ಗೆ ಎಷ್ಟು ಹೊತ್ತಾದರೂ ಎದ್ದಿರಲಿಲ್ಲ. ಹೀಗಾಗಿ ಮನೆಯವರು ಕೋಣೆಯೊಳಗೆ ಹೋಗಿ ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
    ಸಂದೀಪ್ ಈ ವರ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯಾಗಿದ್ದು, ಕಳೆದ 1-2 ವರ್ಷದಿಂದ ಸರ್ಕಾರದ ಕೋವಿಡ್ ನಿಯಮಗಳಿಂದ ಶಾಲೆಗಳು ಸರಿಯಾಗಿ ನಡೆಯುತ್ತಿರಲಿಲ್ಲ, ಮಕ್ಕಳ ಮುಂದಿನ ಭವಿಷ್ಯಕ್ಕೆ ಇದು ತೊಂದರೆಯಾಗುತ್ತಿದೆ ಎಂದು ಗೆಳೆಯರಲ್ಲಿ ಬೇಸರ ವ್ಯಕ್ತಪಡಿಸಿದ್ದ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts