ದುಬೈ: ದೂರದ ದುಬೈನಲ್ಲಿ ಒಕ್ಕಲಿಗರ ವಿಹಾರ ಕೂಟ ನಡೆಯಿತು. ಭಾನುವಾರ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ “ಒಕ್ಕಲಿಗ ಕುಟುಂಬಗಳ ಸಮಾಗಮ” ಆಯಿತು.
ದುಬೈ ಒಕ್ಕಲಿಗ ಸಂಘದಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಸಂಘದ ಅಧ್ಯಕ್ಷರಾದ ಕಿರಣ್ ಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 300ಕ್ಕಿಂತ ಹೆಚ್ಚು ಒಕ್ಕಲಿಗ ಸಮುದಾಯದವರು ಒಂದೇ ಸೂರಿನಲ್ಲಿ ಸೇರಿದ್ದರು.
ಇದೇ ಸಂದರ್ಭದಲ್ಲಿ ಹೊಸದಾಗಿ ಆಯ್ಕೆಯಾದ ಸಮಿತಿಯ ಸದ್ಯಸರುಗಳಿಗೆ ಅಭಿನಂದನೆ ಸಲ್ಲಿಸಲಾಯ್ತು. ಇದೇ ವೇಳೆ ಗೌಡರ ಶೈಲಿಯ ಊಟೋಪಚಾರಗಳೊಂದಿಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಕಣ್ಮನ ಸೆಳೆದವು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಗ್ಯಾರಂಟಿ: ಪ್ರಧಾನಿ ಮೋದಿ