More

    ಸ್ವೀಪ್ ಸಮಿತಿಯಿಂದ ಮತದಾರ ಜಾಗೃತಿ ಸಭೆ

    ಧಾರವಾಡ: ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಕೈಗಾರಿಕಾ ಸಂಘ, ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಕಾರ್ಮಿಕರ ಸಂಘ, ಕ್ರೀಡಾ ಕ್ಲಬ್, ಚೇಂಬರ್ ಆಫ್ ಕಾಮರ್ಸ್ ಸಂಸ್ಥೆಗಳ ಪ್ರತಿನಿಽಗಳೊಂದಿಗೆ ಮತದಾನ ಜಾಗೃತಿ ಸಭೆ ಜಿಲ್ಲಾ ಸ್ವೀಪ್ ನೋಡಲ್ ಅಽಕಾರಿ ಹಾಗೂ ಜಿ.ಪಂ. ಸಿಇಒ ಸ್ವರೂಪ ಟಿ.ಕೆ. ಅಧ್ಯಕ್ಷತೆಯಲ್ಲಿ ಮಂಗಳವಾರ ಜರುಗಿತು.
    ಜಿ.ಪಂ. ಸಿಇಒ ಸ್ವರೂಪ ಟಿ.ಕೆ. ಮಾತನಾಡಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಜಾಗೃತಿ ಮೂಡಿಸಲು ವಾಕಥಾನ್, ಬೈಕ್ ರ‍್ಯಾಲಿ, ರಂಗೋಲಿ ಸ್ಪರ್ಧೆ, ಮೆಹಂದಿ ಹಾಗೂ ಮುತ್ತೆÊದೆಯರಿಗೆ ಉಡಿ ತುಂಬುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
    ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಿಕೊಳ್ಳಬೇಕು. ಅರ್ಹರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಸದೃಢ ಭಾರತ ನಿರ್ಮಿಸಲು ಸಹಕರಿಸಬೇಕು ಎಂದರು.
    ಜಿ.ಪA. ಮುಖ್ಯ ಯೋಜನಾಽಕಾರಿ ದೀಪಕ ಮಡಿವಾಳರ, ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯ ಕೇಂದ್ರ ಜಂಟಿ ನಿರ್ದೇಶಕ ಶಿವಪುತ್ರಪ್ಪ ಆರ್.ಎಚ್., ಕಾರ್ಮಿಕ ಮತ್ತು ಯುವ ಸಬಲೀಕರಣ ಇಲಾಖೆ, ಮಹಾನಗರ ಪಾಲಿಕೆ ಅಽಕಾರಿಗಳು, ಚಲನಚಿತ್ರ ಮಂದಿರ ಮಾಲೀಕರ ಸಂಘದ ಸದಸ್ಯರು, ವಿವಿಧ ಕೈಗಾರಿಕಾ ಸಂಘಗಳು ಹಾಗೂ ವಿವಿಧ ಸಂಸ್ಥೆಗಳ ಪ್ರತಿನಿಽಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts