ಶಿವಮೊಗ್ಗ: ತಾಲೂಕಿನ ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 200ಕ್ಕೂ ಅಧಿಕ ಮತದಾರರಿಗೆ ಉಪಾಹಾರ ವ್ಯವಸ್ಥೆ ಮಾಡುತ್ತಿದ್ದ ತೋಟದ ಮನೆ ಮೇಲೆ ಚುನಾವಣಾ ನೀತಿ ಸಂಹಿತೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದು ಅಡುಗೆ ಮಾಡುತ್ತಿದ್ದವರು ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಈಗಷ್ಟೇ ಮದುವೆಯಾಗಿರುವ ಗಾಯಕಿಗೆ ಯೌವನದ ಮಗ! ಅಭಿಮಾನಿಗಳಿಗೆ ಶಾಕ್ ನೀಡಿದ ನೇಹಾ ಕಕ್ಕರ್!
ಹೊಸಹಳ್ಳಿ ಗ್ರಾಪಂಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಮತದಾರರಿಗೆ ಹಂಚಲು ಪಲಾವ್ ಮಾಡಿಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳಾದ ಎನ್.ಚಂದ್ರಪ್ಪ ಮತ್ತು ಕಲ್ಲಪ್ಪ ದಾಳಿ ನಡೆಸಿದ್ದಾರೆ. ಪಲಾವ್. ಮೊಸರು ಬಜ್ಜಿ, ಪಾತ್ರೆಗಳು, ಸಿದ್ಧವಾಗಿದ್ದ ಪಲಾವ್ ಹಾಗೂ ಆಹಾರ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಪಾಹಾರ ತಯಾರಿಸಿದ ಅಭ್ಯರ್ಥಿ ಯಾರೆಂಬುದು ತಿಳಿದುಬಂದಿಲ್ಲ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿವಾಹಿತ ಕಾನ್ಸ್ಟೇಬಲ್ ಜತೆ ಮಹಿಳಾ ಎಸ್ಐ ಲವ್ವಿಡವ್ವಿ: ಏನೇ ಮಾಡಿದ್ರೂ ಸಂಬಂಧ ಮಾತ್ರ ಬಿಡ್ತಿಲ್ಲ!
ಮಾನಸಿಕ ಅಸ್ವಸ್ಥ ಗಂಡನೆದುರೇ ನಡೆಯುತ್ತಿತ್ತು ಅತ್ತಿಗೆಯ ಅಫೇರ್! ವಿಷಯ ಗೊತ್ತಿದ್ದ ಮೈದುನನಿಗೆ ಅತ್ತಿಗೆ ಮಾಡಿದ್ದೇನು?