More

    ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು: ಇಬ್ಬರು ಐಎಎಸ್​ ಅಧಿಕಾರಿಗಳ ಅಮಾನತು

    ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಪ್ರಕರಣ ಸಂಬಂಧ ಇಬ್ಬರು ಐಎಎಸ್​ ಅಧಿಕಾರಿಗಳನ್ನು ಕೇಂದ್ರ ಚುನಾವಣಾ ಆಯೋಗ ಅಮಾನತು ಮಾಡುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಕಟ್ಟಪ್ಪಣೆ ವಿಧಿಸಿದೆ.

    ಬಿಬಿಎಂಪಿ ವಿಶೇಷ ಆಯುಕ್ತ ಎಸ್​.ರಂಗಪ್ಪ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್​ ಅವರನ್ನು ತನಿಖೆ ಹಿನ್ನೆಲೆ ತತ್​ಕ್ಷಣದಿಂದ ಅಮಾನತು ಮಾಡುವಂತೆ ಸೂಚಿಸಿದೆ. ಹಾಗೂ ಶಿವಾಜಿನಗರ, ಚಿಕ್ಕಪೇಟೆ, ಮಹದೇವಪುರ ವಿಧಾನಸಭಾ ಕ್ಷೇತ್ರಗಳ ಮತದಾರರಪಟ್ಟಿ ಸಮಗ್ರ ಪರಿಶೀಲನೆಗೆ ನಿರ್ದೇಶನ ನೀಡಿದೆ.

    ರಂಗಪ್ಪ ಅವರು ಶಿವಾಜಿನಗರ ಮತ್ತು ಚಿಕ್ಕಪೇಟೆ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿದ್ದರೆ, ಶ್ರೀನಿವಾಸ್​ ಅವರು ಮಹದೇವಪುರ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಯಾಗಿದ್ದರು.

    ಮೂರು ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪರಿಶೀಲನೆಗಾಗಿ ವಿಶೇಷ ಅಧಿಕಾರಿಗಳನ್ನು ನೇಮಿಸುವಂತೆ ಮೂವರು ಐಎಎಸ್​ ಅಧಿಕಾರಿಗಳನ್ನು ನೇಮಿಸಲಾಗಿದೆ.

    ಶಿವಾಜಿನಗರ ಕ್ಷೇತ್ರಕ್ಕೆ ಐಎಎಸ್​ ಅಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸ್, ಚಿಕ್ಕಪೇಟೆ ಕ್ಷೇತ್ರಕ್ಕೆ ಡಾ.ವಿಶಾಲ್, ಮಹದೇವಪುರ ಕ್ಷೇತ್ರಕ್ಕೆ ಅಜಯ್ ನಾಗಭೂಷಣ್ ಅವರನ್ನು ನೇಮಿಸಲಾಗಿದೆ. ಈ ಮೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

    ಈ ಕುರತು ಪ್ರತಿಕ್ರಿಯಸಿರುವ ಸಿಎಂ, ಪ್ರಕರಣ ಸಂಬಂಧ ಮುಕ್ತ ತನಿಖೆ ಮಾಡಿಸಲು ಸರ್ಕಾರ ಮುಕ್ತವಾಗಿದೆ. ಹೀಗಾಗಿಯೇ ನಾವು ತನಿಖೆಗೆ ಕೊಟ್ಟಿರೋದು. ಹಲವರ ಬಂಧನ ಕೂಡ ಆಗಿದೆ. ಚುನಾವಣಾ ಆಯೋಗದ ತನಿಖೆಯನ್ನು ಸ್ವಾಗತಿಸುತ್ತೇವೆ ಎಂದರು.

    ತಿಪಟೂರಿನಲ್ಲಿ ನಾಳೆ ಬೆಳಗ್ಗೆಯಿಂದ 2 ದಿನ ಮದ್ಯ ಮಾರಾಟಕ್ಕೆ ಬ್ರೇಕ್​!

    ನಾನು ಮದ್ವೆ ಆಗ್ಬೇಕು, ಪ್ಲೀಸ್​ ಹೆಣ್ಣು ಹುಡುಕಿ ಕೊಡಿ ಸಾರ್… ಶಿವಮೊಗ್ಗ ಎಸ್ಪಿಗೆ ಜಾತಕ ಕೊಟ್ಟು ಅರ್ಜಿ ಸಲ್ಲಿಸಿದ ಯುವಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts