ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು: ಇಬ್ಬರು ಐಎಎಸ್​ ಅಧಿಕಾರಿಗಳ ಅಮಾನತು

blank

ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಪ್ರಕರಣ ಸಂಬಂಧ ಇಬ್ಬರು ಐಎಎಸ್​ ಅಧಿಕಾರಿಗಳನ್ನು ಕೇಂದ್ರ ಚುನಾವಣಾ ಆಯೋಗ ಅಮಾನತು ಮಾಡುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಕಟ್ಟಪ್ಪಣೆ ವಿಧಿಸಿದೆ.

ಬಿಬಿಎಂಪಿ ವಿಶೇಷ ಆಯುಕ್ತ ಎಸ್​.ರಂಗಪ್ಪ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್​ ಅವರನ್ನು ತನಿಖೆ ಹಿನ್ನೆಲೆ ತತ್​ಕ್ಷಣದಿಂದ ಅಮಾನತು ಮಾಡುವಂತೆ ಸೂಚಿಸಿದೆ. ಹಾಗೂ ಶಿವಾಜಿನಗರ, ಚಿಕ್ಕಪೇಟೆ, ಮಹದೇವಪುರ ವಿಧಾನಸಭಾ ಕ್ಷೇತ್ರಗಳ ಮತದಾರರಪಟ್ಟಿ ಸಮಗ್ರ ಪರಿಶೀಲನೆಗೆ ನಿರ್ದೇಶನ ನೀಡಿದೆ.

ರಂಗಪ್ಪ ಅವರು ಶಿವಾಜಿನಗರ ಮತ್ತು ಚಿಕ್ಕಪೇಟೆ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿದ್ದರೆ, ಶ್ರೀನಿವಾಸ್​ ಅವರು ಮಹದೇವಪುರ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಯಾಗಿದ್ದರು.

ಮೂರು ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪರಿಶೀಲನೆಗಾಗಿ ವಿಶೇಷ ಅಧಿಕಾರಿಗಳನ್ನು ನೇಮಿಸುವಂತೆ ಮೂವರು ಐಎಎಸ್​ ಅಧಿಕಾರಿಗಳನ್ನು ನೇಮಿಸಲಾಗಿದೆ.

ಶಿವಾಜಿನಗರ ಕ್ಷೇತ್ರಕ್ಕೆ ಐಎಎಸ್​ ಅಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸ್, ಚಿಕ್ಕಪೇಟೆ ಕ್ಷೇತ್ರಕ್ಕೆ ಡಾ.ವಿಶಾಲ್, ಮಹದೇವಪುರ ಕ್ಷೇತ್ರಕ್ಕೆ ಅಜಯ್ ನಾಗಭೂಷಣ್ ಅವರನ್ನು ನೇಮಿಸಲಾಗಿದೆ. ಈ ಮೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ಈ ಕುರತು ಪ್ರತಿಕ್ರಿಯಸಿರುವ ಸಿಎಂ, ಪ್ರಕರಣ ಸಂಬಂಧ ಮುಕ್ತ ತನಿಖೆ ಮಾಡಿಸಲು ಸರ್ಕಾರ ಮುಕ್ತವಾಗಿದೆ. ಹೀಗಾಗಿಯೇ ನಾವು ತನಿಖೆಗೆ ಕೊಟ್ಟಿರೋದು. ಹಲವರ ಬಂಧನ ಕೂಡ ಆಗಿದೆ. ಚುನಾವಣಾ ಆಯೋಗದ ತನಿಖೆಯನ್ನು ಸ್ವಾಗತಿಸುತ್ತೇವೆ ಎಂದರು.

ತಿಪಟೂರಿನಲ್ಲಿ ನಾಳೆ ಬೆಳಗ್ಗೆಯಿಂದ 2 ದಿನ ಮದ್ಯ ಮಾರಾಟಕ್ಕೆ ಬ್ರೇಕ್​!

ನಾನು ಮದ್ವೆ ಆಗ್ಬೇಕು, ಪ್ಲೀಸ್​ ಹೆಣ್ಣು ಹುಡುಕಿ ಕೊಡಿ ಸಾರ್… ಶಿವಮೊಗ್ಗ ಎಸ್ಪಿಗೆ ಜಾತಕ ಕೊಟ್ಟು ಅರ್ಜಿ ಸಲ್ಲಿಸಿದ ಯುವಕ!

Share This Article

Psychology : ಪ್ಯಾಂಟ್ ಜೇಬಿನಲ್ಲಿ ಕೈ ಹಾಕಿಕೊಂಡು ನಡೆಯುವ ಅಭ್ಯಾಸ ನಿಮಗಿದೆಯೇ? ಇದು ನಿಮ್ಮ ವ್ಯಕ್ತಿತ್ವ

Psychology: ಸಾಮಾನ್ಯವಾಗಿ ನೀವು ಅನೇಕ ಜನರು ತಮ್ಮ ಜೇಬಿನಲ್ಲಿ ಕೈ ಹಾಕಿಕೊಂಡು ತಿರುಗಾಡುವುದನ್ನು ನೋಡುತ್ತೀರಿ. ಇದು…

Health Benefits : ಕೆಮ್ಮು, ನೆಗಡಿ ಕೇವಲ ಎರಡೇ ನಿಮಿಷದಲ್ಲಿ ಗುಣವಾಗುತ್ತದೆ..ಹೀಗೆ ಮಾಡಿ ನೋಡಿ

Health Benefits : ಕೆಲವು ಜನರು ಕೆಮ್ಮು ಮತ್ತು ಶೀತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರಿಗೆ ವಾರಗಟ್ಟಲೆ…

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…