ರಾಜಧಾನಿ ಜನತೆ ನಿರ್ಭೀತಿಯಿಂದ ಮತದಾನ ಮಾಡಿ: ಪಿ.ಎನ್.ರವೀಂದ್ರ

ಬೆಂಗಳೂರು: ನಗರದ ಜನತೆ ಪ್ರವಾಸಕ್ಕೆ ತೆರಳದೆ ಮೇ 10ರಂದು ಮತಗಟ್ಟೆ ಕೇಂದ್ರಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಬಿಬಿಎಂಪಿಯ ವಿಶೇಷ ಆಯುಕ್ತ ಪಿ.ಎನ್.ರವೀಂದ್ರ ಹೇಳಿದ್ದಾರೆ. ಸಂಜಯ್ ಗಾಂಧಿ ಶಿಕ್ಷಣ ವಿದ್ಯಾಲಯ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಬಿಬಿಎಂಪಿ ಕಂದಾಯ ಅಧಿಕಾರಿ ಹೆಬ್ಬಾಳ ವಿಭಾಗ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ‘ಜಾಥಾ’ ಕಾರ್ಯಕ್ರಮದಲ್ಲಿ ಮಾತನಾಡಿದರು. ನಿರ್ಭೀತಿಯಿಂದ ಮತದಾನ ಮಾಡಿ ಹಿಂದಿನ ಬಹುತೇಕ ಚುನಾವಣೆಗಳಲ್ಲಿ ಬೆಂಗಳೂರು ನಗರ ಪ್ರದೇಶದಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿತ್ತು. ಹೀಗಾಗಿ, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಶತಾಯ … Continue reading ರಾಜಧಾನಿ ಜನತೆ ನಿರ್ಭೀತಿಯಿಂದ ಮತದಾನ ಮಾಡಿ: ಪಿ.ಎನ್.ರವೀಂದ್ರ