More

    ಕರಮುಡಿಯಲ್ಲಿ ಮತದಾನ ಜಾಗೃತಿ

    ಯಲಬುರ್ಗಾ: ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯ ಮತದಾನ ಮಾಡಬೇಕು ಎಂದು ತಾಪಂ ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಹೇಳಿದರು.ತಾಲೂಕಿನ ಕರಮುಡಿ ಗ್ರಾಮದಲ್ಲಿ ಗ್ರಾಪಂ, ಚುನಾವಣಾ ಆಯೋಗ, ಸ್ವೀಪ್ ಸಮಿತಿ ಬುಧವಾರ ಆಯೋಜಿಸಿದ್ದ 2ನೇ ಹಂತದ ಮತದಾನ ಜಾಗೃತಿ ಜಾಥಾ, ಬೈಕ್ ರ್ಯಾಲಿ ಮೂಲಕ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಈ ಬಾರಿ ವೋಟ್ ಮಾಡಬೇಕು

    ಯಾರೂ ಮತದಾನದಿಂದ ತಪ್ಪಿಸಿಕೊಳ್ಳಬಾರದು. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಮತದಾನ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸಲಾಗುತ್ತಿದೆ. ಕಳೆದ ಬಾರಿ ಮತದಾನದಿಂದ ತಪ್ಪಿಸಿಕೊಂಡವರು ಈ ಬಾರಿ ವೋಟ್ ಮಾಡಬೇಕು ಎಂದರು.

    ಈ ವೇಳೆ ಕಳೆದ ಬಾರಿ ಕಡಿಮೆ ಮತದಾನವಾದ ವಾರ್ಡ್‌ಗಳ ಮನೆಗೆ ಬಿಎಲ್‌ಒ, ಗ್ರಾಪಂ ಸಿಬ್ಬಂದಿ ತೆರಳಿ ಕಡ್ಡಾಯ ಮತದಾನ ಮಾಡುವಂತೆ ಅರಿವು ಮೂಡಿಸಿದರು.
    ತಾಪಂ ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ಗ್ರಾಪಂ ಕಾರ್ಯದರ್ಶಿ ಮೆಹಬೂಬ್ ಹಿರೇಮನಿ, ಡಿಇಒ ಮಂಜುನಾಥ ನಿಂಗೋಜಿ, ಕರವಸೂಲಿಗಾರ ಉಮೇಶ ಇತರರಿದ್ದರು.

    ಇದನ್ನೂ ಓದಿ: ಖಾಸಗಿ ವಿಡಿಯೋ ಲೀಕ್​ ಮಾಡುವುದಾಗಿ ನಟ ಸುದೀಪ್​ಗೆ ಬೆದರಿಕೆ ಪತ್ರ: ದೂರು ದಾಖಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts