More

    ಮತದಾನ ಜಾಗೃತಿ ಕಾಯಕ್ರಮ

    ಹಾಸನ: ಅರಸೀಕೆರೆಪ್ರಸಕ್ತ ಸಾಲಿನ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಮತದಾನದಿಂದ ವಂಚಿತರಾಗಬಾರದು ಎಂದು ಕೇಂದ್ರ ಚುನಾವಣಾ ಆಯೋಗ ಜಿಲ್ಲಾ ಪಂಚಾಯಿತಿ, ಹಾಸನ ಜಿಲ್ಲಾ ಸ್ವೀಪ್ ಸಮಿತಿ ಹಾಸನ ತಾಲೂಕು ಪಂಚಾಯಿತಿ, ಅರಸೀಕೆರೆ ಹಾಗೂ ಬಾಣಾವರ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಗರದ ಬಸ್ ನಿಲ್ದಾಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಜಿಲ್ಲಾ ಸ್ವೀಪ್ ಸಮಿತಿಯು ಕಲಾತಂಡದವರಿಂದ ಜಾನಪದದ ಶೈಲಿಯಲ್ಲಿ ಹಾಡುಗಳ ಹಾಡುವ ಮೂಲಕ ಮತದಾನ ನಗರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಜಾಗೃತಿ ಮೂಡಿಸಲಾಯಿತು. ಬಾಣಾವರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀನಾಥ್ ಮಾತನಾಡಿ, ಮತದಾನ ನಮ್ಮ ಜನ್ಮಸಿದ್ಧ ಹಕ್ಕು.

    ಪ್ರತಿಯೊಬ್ಬ ಪ್ರಜೆಯೂ ಕೂಡ ಕಡ್ಡಾಯವಾಗಿ ಮತದಾನ ಮಾಡಬೇಕು. ಯಾವುದೇ ಕಾರಣಕ್ಕೂ ಮತದಾನದಿಂದ ವಂಚಿತರಾಗಬಾರದು. ಆದ್ದರಿಂದ ಅಂಗವಿಕಲರು ವೃದ್ಧರಿಗೆ ಚುನಾವಣಾ ಆಯೋಗವು ಮತದಾನ ಮಾಡಲು ಹಲವು ರೀತಿಯ ಯೋಜನೆಗಳನ್ನು ಅನುಷ್ಠಾನ ಮಾಡಿ ಸಹಕರಿಸಿದೆ.

    ಇದರ ಸದುಪಯೋಗ ಪಡೆದುಕೊಂಡು ಎಲ್ಲರೂ ತಪ್ಪದೆ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts