More

    ಮತದಾನ ನಾಗರಿಕರ ಕರ್ತವ್ಯ

    ದೇವದುರ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆಮಿಷಗಳಿಗೆ ಒಳಗಾಗದೆ ಸೂಕ್ತ ಅಭ್ಯರ್ಥಿಗೆ ಮತ ನೀಡಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ಭೂಮನಗುಂಡ ಹೇಳಿದರು.

    ಪಟ್ಟಣದ ತಪ್ಪರಗುಂಡಿ ಮಸೀದಿ ಪ್ರದೇಶದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾದಲ್ಲಿ ಶನಿವಾರ ಮಾತನಾಡಿದರು. 18 ವರ್ಷ ತುಂಬಿದ ದೇಶದ ಪ್ರತಿಯೊಬ್ಬರಿಗೂ ಸಂವಿಧಾನ ಮತದಾನದ ಹಕ್ಕು ನೀಡಿದೆ. ಯಾರೊಬ್ಬರೂ ಮತದಾನದಿಂದ ವಂಚಿತರಾಗಬಾರದು ಎಂದರು.

    ಆರೋಗ್ಯ ಇಲಾಖೆಯ ಎನ್‌ಆರ್‌ಎಲ್‌ಎಂ ಜಿ.ಮಾರ್ಕಂಡೆಯ್ಯ ಮಾತನಾಡಿ, ದೇಶದ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲು ಎಲ್ಲರೂ ಚುನಾವಣೆ ಪ್ರಕ್ರಿಯೆಯಲ್ಲಿ ತಪ್ಪದೆ ಭಾಗವಹಿಸಬೇಕಿದೆ. ಮತ ದಾನ ಮಾಡಬೇಕೇ ಹೊರತು ಹಣದ ಆಮಿಷಕ್ಕೆ ಮಾರಿಕೊಳ್ಳಬಾರದು. ಸೂಕ್ತ ಅಭ್ಯರ್ಥಿಗೆ ಮತದಾನ ಮಾಡುವ ಮೂಲಕ ಶೇ.100 ಮತದಾನ ಆಗಲು ಸಹಕರಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts