More

    ವಚನಗಳ ಮೂಲಕ ಸಮಾಜ ಎಚ್ಚರಿಸುತ್ತಿದ್ದ ಶರಣ; ಶಾಸಕ ರಾಜಾ ವೆಂಕಟಪ್ಪನಾಯಕ ಅಭಿಮತ

    ಮಾನ್ವಿ: ನಿಜಶರಣ ಅಂಬಿಗರ ಚೌಡಯ್ಯನವರು ನೇರ, ದಿಟ್ಟ ನುಡಿಯ ವಚನಗಳ ಮೂಲಕ ಸಮಾಜ ಎಚ್ಚರಿಸುತ್ತಿದ್ದರು ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ಹೇಳಿದರು. ಪಟ್ಟಣದ ಬಸ್‌ನಿಲ್ದಾಣ ಹತ್ತಿರದ ರೈತ ಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶರಣರು ಉತ್ತಮ ಸಮಾಜ ನಿರ್ಮಾಣಕ್ಕೆ ವಚನಗಳನ್ನು ನೀಡಿದ್ದಾರೆ, ನಾವೆಲ್ಲರೂ ಅವರ ತತ್ವಗಳನ್ನು ಪಾಲಿಸಬೇಕು ಎಂದರು.

    ಗಂಗಾಮತ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಶಿಕ್ಷಣದಿಂದ ಮಾತ್ರ ಸಮಾಜ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ನಿಜಶರಣ ಅಂಬಿಗರ ಚೌಡಯ್ಯನವರ ಕುರಿತು ರೇವಣಸಿದ್ದಯ್ಯ ಹಿರೇಮಠ ಉಪನ್ಯಾಸ ನೀಡಿದರು. ತಾಪಂ ಅಧ್ಯಕ್ಷ ಚನ್ನಬಸವ ಬೆಟ್ಟದೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಶಿವಶಂಕರಗೌಡ ಬಾಗಲವಾಡ, ತಹಸೀಲ್ದಾರ್ ಅಮರೇಶ ಬಿರಾದಾರ್, ಬಿಇಒ ವೆಂಕಟೇಶ ಗುಡಿಹಾಳ ಇದ್ದರು.

    ಮೆರವಣಿಗೆ: ಪಟ್ಟಣದ ಅಂಬೇಡ್ಕರ್ ವೃತ್ತದಿಂದ ರೈತ ಭವನ ವರೆಗೆ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಡಾ.ತನುಶ್ರೀ ಪ್ರವೀಣ ಕುಮಾರ ಸೇರಿ ಗಂಗಾಮತ ಸಮುದಾಯದ ಮುಖಂಡರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts