ರಿಪ್ಪನ್ಪೇಟೆ: ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಂಪರಾಗತ ವಾರ್ಷಿಕ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಆರು ದಿನಗಳ ಪರ್ಯಂತ ವಿವಿಧ ಜಿನಾಗಮ ಶಾಸ್ತ್ರೋಕ್ತ ಪೂಜೆ, ಆರಾಧನೆ, ಉತ್ಸವಗಳು ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ದಿವ್ಯ ಸಾನಿಧ್ಯ ಮತ್ತು ಮಾರ್ಗದರ್ಶನದಲ್ಲಿ ನಡೆದವು.
ನಿತ್ಯವಿ ಸಹಿತ ಪೂಜಾ ವಿಧಾನಗಳು, ಕುಂಕುಮೋತ್ಸವ ಜರುಗಿತು. ಕುಮದ್ವತಿ ತೀರ್ಥದಲ್ಲಿ ಉತ್ಸವ ಮೂರ್ತಿಯ ಅವಭೃತ ಸ್ನಾನದ ಬಳಿಕ ಸಾಲಾಂಕೃತ ಪಲ್ಲಕ್ಕಿ ಹಾಗೂ ಗಜವಾಹನದಲ್ಲಿ ದೇವರ ಬಿಂಬವನ್ನು ಜಿನಾಲಯಕ್ಕೆ ಸ್ವಾಮೀಜಿ ಬರಮಾಡಿಕೊಂಡರು. ಅಷ್ಟಾವಧಾನದ ನಂತರ ಧ್ವಜಾವರೋಹಣಗೈದು ಪದ್ಮಾವತಿ ದೇವಿ ಬಿಂಬವನ್ನು ಜಿನಾಲಯದಲ್ಲಿ ಪೂಜಿಸಲಾಯಿತು. ಮಹಾಪೂಜೆ ಮಹಾಮಂಗಳಾರತಿ ಸಂದರ್ಭ ಭಕ್ತರು ಶ್ರೀ ಪದ್ಮಾವತಿ ಮತಾಕೀ ಜೈ, ಶ್ರೀ ಪಾರ್ಶ್ವನಾಥ ಕೀ ಜೈ, ಜೈನ ಧರ್ಮಕೀ ಜೈ ಎಂದು ಜಯಕಾರ ಹಾಕಿದರು.
ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತರು ತಮ್ಮ ಜೀವನದಲ್ಲಿ ಧರ್ಮಪಥದಲ್ಲಿ ಸಾಗಿದಾಗ ಇಷ್ಟಾರ್ಥ, ಯಶಸ್ಸು ಲಭಿಸುತ್ತದೆ ಎಂದು ಡಾ. ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸಂದೇಶ ನೀಡಿದರು.