More

    ಕೋವಿಡ್​ ವ್ಯಾಕ್ಸಿನೇಷನ್​ನಲ್ಲೂ ‘ವಿವಿಐಪಿ ಸಂಸ್ಕೃತಿ’ ಇದ್ಯಾ? ಬಿ.ಸಿ.ಪಾಟೀಲ್​ ನಡೆಗೆ ಆಕ್ರೋಶ

    ಹಾವೇರಿ: ಕೋವಿಡ್​ ವ್ಯಾಕ್ಸಿನೇಷನ್​ನಲ್ಲೂ ‘ವಿವಿಐಪಿ ಸಂಸ್ಕೃತಿ’ ಇದ್ಯಾ? ಇಂತಹದ್ದೊಂದು ಪ್ರಶ್ನೆ ಕೃಷಿ ಸಚಿವ ಬಿ.ಸಿ.ಪಾಟೀಲ್​ರ ನಡೆ ಹುಟ್ಟುಹಾಕಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಆಸ್ಪತ್ರೆಗೆ ಹೋಗಿ ಲಸಿಕೆ ಪಡೆದಿದ್ದಾರೆ. ಆದರೆ, ಬಿ.ಸಿ.ಪಾಟೀಲ್​ ಮಾತ್ರ ಆರೋಗ್ಯ ಸಿಬ್ಬಂದಿಯನ್ನ ತನ್ನ ಮನೆ ಬಾಗಿಲಿಗೇ ಕರೆಸಿಕೊಂಡು ಲಸಿಕೆ ಪಡೆದಿದ್ದಾರೆ.

    ಆಸ್ಪತ್ರೆಗೆ ಹೋಗದೆ ಮನೆಯಲ್ಲೇ ಲಸಿಕೆ ಪಡೆದ ಕೃಷಿ ಸಚಿವರ ನಡೆಗೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ನರೇಂದ್ರ ಮೋದಿಗಿಂತಲೂ ಬಿ.ಸಿ.ಪಾಟೀಲ್​ ದೊಡ್ಡವರಾ? ಹಿರಿ ಜೀವಗಳು ಆಸ್ಪತ್ರೆ ಬಾಗಿಲಲ್ಲಿ ಕಾದರೂ ಪರವಾಗಿಲ್ಲ, ಇವರ ದೌಲತ್ತಿಗೆ ಆರೋಗ್ಯ ಸಿಬ್ಬಂದಿಯೇ ಮನೆ ಬಾಗಿಲಿಗೆ ಬಂದು ಲಸಿಕೆ ಕೊಡುತ್ತಾರೆ. ಇದೆಂಥಾ ನ್ಯಾಯ? ಜನಸಾಮಾನ್ಯರಿಗೆ ಒಂದು ಇವರಿಗೊಂದು ಏಕೆ? ಕೋವಿಡ್​ ಲಸಿಕೆ ವಿಚಾರದಲ್ಲೂ ವಿವಿಐಪಿ ಸಂಸ್ಕೃತಿ ಏಕೆ? ಎಂದು ಸಾರ್ವಜನಿಕ ವಲಯ ಪ್ರಶ್ನಿಸಿದೆ. ಇದನ್ನೂ ಓದಿರಿ ಜೀವಂತ ಯುವಕನನ್ನೇ ಪೋಸ್ಟ್ ಮಾರ್ಟಂಗೆ ಕರೆದೊಯ್ದ ಆಸ್ಪತ್ರೆ ಸಿಬ್ಬಂದಿ! ಮುಂದೇನಾಯ್ತು?

    ಕೋವಿಡ್​ ವ್ಯಾಕ್ಸಿನೇಷನ್​ನಲ್ಲೂ 'ವಿವಿಐಪಿ ಸಂಸ್ಕೃತಿ' ಇದ್ಯಾ? ಬಿ.ಸಿ.ಪಾಟೀಲ್​ ನಡೆಗೆ ಆಕ್ರೋಶಸೋಮವಾರ ಬೆಳಗ್ಗೆ ಹಿರೇಕೆರೂರು ಆಸ್ಪತ್ರೆಯ ಸಿಬ್ಬಂದಿ ಕೃಷಿ ಸಚಿವ ಬಿ.ಸಿ. ಪಾಟೀಲ್​ರ ಮನೆಗೆ ಬಂದು ಸಚಿವರು ಮತ್ತು ಅವರ ಪತ್ನಿ ವನಜಾ ಪಾಟೀಲ್​ಗೆ ಲಸಿಕೆ ಹಾಕಿದ್ದರು. ಆಸ್ಪತ್ರೆಗೆ ಹೋಗಿ ಲಸಿಕೆ ಪಡೆಯಬೇಕಿದ್ದವರು ತಮ್ಮ ಮನೆಗೇ ಕರೆಸಿಕೊಂಡು ಹಾಕಿಸಿಕೊಂಡಿದ್ದಾರೆ.

    ಈ ಕುರಿತು ರಾಮನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಈ ಸರ್ಕಾರದಲ್ಲಿ ಏನು ಬೇಕಾದರೂ ನಡೆಯುತ್ತದೆ ಎಂದರು.

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ಮನೆಯಲ್ಲೇ ಕೋವಿಡ್​ ವ್ಯಾಕ್ಸಿನ್ ಪಡೆಯಲು ಅವಕಾಶವಿಲ್ಲ: ಸಚಿವ ಡಾ.ಸುಧಾಕರ್

    ಪ್ರಾಣಾಪಾಯದಿಂದ ನಟ ರಿಷಬ್​ ಶೆಟ್ಟಿ, ನಟಿ ಗಾನವಿ ಜಸ್ಟ್ ಮಿಸ್​!

    ಕಾಲೇಜು ಕಟ್ಟಡದಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ! ಡೆತ್​ನೋಟ್​ ಪತ್ತೆ, ಸಹಪಾಠಿಗಳ ಪ್ರತಿಭಟನೆ

    ಮೊದಲ ರಾತ್ರಿಯೇ ಮದುಮಗಳ ದುರಂತ ಸಾವು! ಮದ್ವೆ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಜೀವಂತ ಯುವಕನನ್ನೇ ಪೋಸ್ಟ್ ಮಾರ್ಟಂಗೆ ಕರೆದೊಯ್ದ ಆಸ್ಪತ್ರೆ ಸಿಬ್ಬಂದಿ! ಮುಂದೇನಾಯ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts