ಸಾಯಿಲೇಔಟ್​ನ ಹತ್ತಾರು ಮನೆಗಳಿಗೆ ನುಗ್ಗಿದ ನೀರು:ನಿವಾಸಿಗಳ ಸಮಸ್ಯೆ ಆಲಿಸಿದ ಮಹೇಶ್ವರರಾವ್​

blank

ಬೆಂಗಳೂರು: ರಾಜಧಾನಿಯಲ್ಲಿ ಶನಿವಾರ ಸುರಿದ ಮಳೆಗೆ ಸಾಯಿಲೇಔಟ್​ ಸೇರಿ ನಗರದ ವಿವಿಧ ಬಡಾವಣೆಗಳ ನೂರಾರು ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡಿದ್ದರು.27 ಮರಗಳು ಧರಶಾಹಿಯಾದರೆ, 66 ರೊಂಬೆ-ಕೊಂಬೆಗಳು ಮುರಿದು ಬಿದ್ದು ಕಾರು ಸೇರಿ ಇತರೆ ವಾಹನಗಳು ಮತ್ತು ವಿದ್ಯುತ್​ ಕಂಬಗಳು ಜಖಂಗೊಂಡಿದ್ದವು. ಬಿದ್ದ ಮರವನ್ನು ಪಾಲಿಕೆಯ ಅರಣ್ಯ ವಿಭಾಗದ ಸಿಬ್ಬಂದಿ ಭಾನುವಾರವೂ ತೆರವುಗೊಳಿಸಿದ್ದರು.ಬಿದ್ದ ಕಂಬಗಳನ್ನು ದುರಸ್ಥಿ ಮಾಡುವ ಕಾರ್ಯದಲ್ಲಿ ಬೆಸ್ಕಾಂ ಸಿಬ್ಬಂದಿ ತೊಡಗಿದ್ದರು.

blank

ಮಹದೇವಪುರ ವಲಯ ವ್ಯಾಪ್ತಿಯ ಸಾಯಿ ಲೇಔಟ್​ನಲ್ಲಿ ಜಲಾವೃತಗೊಂಡಿರುವ ಪ್ರದೇಶಗಳಿಗೆ ಟ್ರ್ಯಾಕ್ಟರ್​​​​​​ನಲ್ಲಿ ತೆರಳಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರರಾವ್​, ನಿವಾಸಿಗಳ ಸಮಸ್ಯೆ ಆಲಿಸಿದರು. ನಿಂತಿರುವ ನೀರನ್ನು ಪಂಪ್​ ಮೂಲಕ ತ್ವರಿತವಾಗಿ ಹೊರ ಹಾಕುವ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಲಾವೃತವಾಗುವುದನ್ನು ತಪ್ಪಿಸುವ ಸಲುವಾಗಿ ಮಳೆಗಾಲ ಮುಗಿಯುವವರೆಗೂ ತಾತ್ಕಾಲಿಕವಾಗಿ ಸಂಪ್​ ನಿರ್ಮಿಸಿ ತುಂಬುವ ನೀರನ್ನು ಹೊರ ಹಾಕಲು ಪಂಪ್​ಸೆಟ್​ ವ್ಯವಸ್ಥೆ ಮಾಡಲಾಗುವುದು. ಇದಕ್ಕೆ ತಂಡವನ್ನು ನಿಯೋಜಿಸಲಾಗುವುದು. ವಿಪತ್ತು ನಿರ್ವಹಣೆ ಅಡಿ ನೀರು ನುಗ್ಗಿರುವ ಮನೆಗಳಿಗೆ ಪರಿಹಾರ ನೀಡಲಾಗುವುದು ಎಂದು ನಿವಾಸಿಗಳಿಗೆ ಭರವಸೆ ನೀಡಿದರು.

ರಾಜಕಾಲುವೆಯಲ್ಲಿ ನಿರಂತರವಾಗಿ ಹೂಳೆತ್ತಿ ಸ್ವಚ್ಛತೆ ಕಾಪಾಡಿಕೊಂಡು ಸರಾಗವಾಗಿ ನೀರು ಹರಿದು ಹೋಗುವ ವ್ಯವಸ್ಥೆ ಮಾಡಲಾಗುವುದು. ಈ ಲೇಔಟ್​ನ್ನು ಬಿಡಿಎ ಅಭಿವೃದ್ಧಿಪಡಿಸಿದ್ದು, ಅಲ್ಲಿನ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಈ ಪ್ರದೇಶವು ರಾಜಕಾಲುವೆಗಿಂತ ಕೆಳ ಮಟ್ಟದಲ್ಲಿರುವ ಕಾರಣ ಜಲಾವೃತವಾಗುತ್ತಿದೆ. ರಾಜಕಾಲುವೆ ಹಾದುಹೋಗುವ ಜಾಗದಲ್ಲಿ ರೈಲ್ವೆ ವೆಂಟ್​ ಸಣ್ಣದಾಗಿರುವ ಪರಿಣಾಮ ನೀರು ಸರಾಗವಾಗಿ ಹರಿದು ಹೋಗಲು ಸಮಸ್ಯೆಯಾಗುತ್ತಿದೆ. ಈ ಸಂಬಂಧ ಈಗಾಗಲೇ ರೈಲ್ವೆ ಇಲಾಖೆ ಜೊತೆ ಸಮನ್ವಯ ಸಾಧಿಸಿ ರೈಲ್ವೆ ವೆಂಟ್​ ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.ಇದನ್ನು ಶ್ರೀಗತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಮಹೇಶ್ವರರಾವ್​ ಹೇಳಿದರು.

ಮಹದೇವಪುರ ವಲಯ ಆಯುಕ್ತ ರಮೇಶ್​, ಯಲಹಂಕ ವಲಯ ಜಂಟಿ ಆಯುಕ್ತ ಮೊಹಮ್ಮದ್​ ನಯೀಮ್​ ಮೊಮಿಮ್​, ಕಾರ್ಯಪಾಲಕ ಅಭಿಯಂತರು ಸೇರಿ ಮೆಟ್ರೋ ಅಧಿಕಾರಿಗಳು ಮತ್ತಿತರರಿದ್ದರು.

ಮಾನ್ಯತಾ ಟೆಕ್​,ನಾಗವಾರ ಜಂನ್​ ಪರಿಶೀಲನೆ: ಮಾನ್ಯತಾ ಟೆಕ್​ ಮತ್ತು ನಾಗವಾರ ಜಂನ್​ ಪರಿಶೀಲಿಸಿದ ಮುಖ್ಯ ಆಯುಕ್ತರು, ಮಾನ್ಯತಾ ಟೆಕ್​ ಬಳಿ ಬರುವ ಮಾನ್ಫೋ ಹತ್ತಿರ ರಾಜಕಾಲುವೆ ಸಂಪರ್ಕ ಸರಿಯಾಗಿಲ್ಲದ ಕಾರಣ ಜಲಾವೃತವಾಗುತ್ತದೆ. ಈ ಸಂಬಂಧ ಹೊಸದಾಗಿ ಮಳೆ ನೀರುಗಾಲುವೆ ನಿರ್ಮಾಣದ ಸಲುವಾಗಿ ಮಾನ್ಯತಾ, ಇಬಿಎಸ್​ ಐಟಿ ಪಾರ್ಕ್​, ಮ್ಯಾನ್ಫೋ, ಕಾರ್ಲೆ ಇನ್ಫಾಟೆಕ್​ ಜೊತೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ನಾಗವಾರ ಜಂಕ್ಷನ್​ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಈ ಜಂನ್​ನಲ್ಲಿ ಜಲಾವೃತವಾಗುವುದನ್ನು ತಪ್ಪಿಸಲು ಮಳೆ ನೀರುಗಾಲುವೆಯಲ್ಲಿ ನಿರಂತರವಾಗಿ ಸ್ವಚ್ಛತೆ ಕಾಪಾಡಲು ಮೆಟ್ರೋ ಅಧಿಕಾರಿಗಳಿಗೆ ಸೂಚಿಸಿದರು. ಹೈಡೆನ್ಸಿಟಿ ಕಾರಿಡಾರ್​ ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂದ ಕ್ರಾಸ್​ ಕಲ್ವರ್ಟ್​ ಕಾಮಗಾರಿ ಮಾಡಲು ಮುಖ್ಯ ಆಯುಕ್ತರು ಸೂಚಿಸಿದರು. ಥಣಿಸಂದ್ರದ ಬಳಿ ಮಳೆ ನೀರುಗಾಲುವೆಯಿಂದ ಹೂಳೆತ್ತಿದ್ದು,ಅಂದಾಜು 20 ಲೋಡ್​ ಹೂಳನ್ನು ತೆರವುಗೊಳಿಸಲಾಗಿದೆ. ಬಾಕಿ ಹೂಳನ್ನು ತ್ವರಿತವಾಗಿ ತೆರವುಗೊಳಿಸಬೇಕು. ಮಳೆ ನೀರುಗಾಲುವೆ ಮೇಲೆ ಸ್ಲಾ$್ಯಬ್​ ಗಳನ್ನು ಅಳಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

 

ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ವರುಣಾರ್ಭಟ: 21ರಂದು 3 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​​​​

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank