ಕಟ್ಟೆಪುರದಿಂದ ಕೆರೆ-ಕಟ್ಟೆಗಳಿಗೆ ನೀರು

blank

ಅರಕಲಗೂಡು: ದೊಡ್ಡಬೆಮ್ಮತ್ತಿ ಮತ್ತು ಸುತ್ತಮುತ್ತಲಿನ ಕೆರೆ-ಕಟ್ಟೆಗಳಿಗೆ ಕಟ್ಟೆಪುರ ಎರಡನೇ ಹಂತದ ನೀರಾವರಿ ಯೋಜನೆಯಡಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎ.ಮಂಜು ತಿಳಿಸಿದರು.

blank

ದಲಿತ ಕಾಲನಿಯಲ್ಲಿ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ತಾಲೂಕಿನ ಮಲ್ಲಿಪಟ್ಟಣ ಹೋಬಳಿ ದೊಡ್ಡಬೆಮ್ಮತ್ತಿ ಗ್ರಾಮದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ತಾವು ಸಚಿವರಾಗಿದ್ದ ವೇಳೆ ಕೊಣನೂರು ಮತ್ತು ಕಣಿಯಾರು ಏತನೀರಾವರಿ ಯೋಜನೆಗಳಿಗೆ ಮುಂಗಡ ಪತ್ರದಲ್ಲಿ ಒಪ್ಪಿಗೆ ಪಡೆಯಲಾಗಿತ್ತು. ನಂತರದ ದಿನಗಳಲ್ಲಿ ಇದನ್ನು ಕೈಬಿಡಲಾಗಿತ್ತು. ಎರಡೂ ಯೋಜನೆಗಳ ವ್ಯಾಪ್ತಿಯ ಕೆರೆ-ಕಟ್ಟೆಗಳನ್ನು ಕಟ್ಟೆಪುರ ಎರಡನೇ ಹಂತದ ಯೋಜನೆಯಲ್ಲಿ ಸೇರ್ಪಡೆ ಮಾಡಲಾಗಿದೆ. ಸರ್ಕಾರ 77 ಕೋಟಿ ರೂ. ಅನುದಾನ ನೀಡಿದ್ದು, 2026ರಲ್ಲಿ ಈ ಭಾಗದ ಕೆರೆಕಟ್ಟೆಗಳಿಗೆ ನೀರು ಹರಿಸಲಾಗುವುದು ಎಂದು ಮಾಹಿತಿ ನೀಡಿದರು.

ಅಲ್ಲಾಪಟ್ಟಣ ಗ್ರಾಮದ ಬಳಿ 180 ಕೋಟಿ ರೂ. ವೆಚ್ಚದಲ್ಲಿ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತೆರೆಯಲಾಗುತ್ತಿದೆ. ಅಲ್ಲದೆ ಕೇರಳಾಪುರ, ಗುಡ್ಡನಕೊಪ್ಪಲು, ಸಿದ್ದಾಪುರ ಗೇಟ್, ಸಂತೆಮರೂರಲ್ಲಿ 66 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಂಡಿದ್ದು, ಇವು ಕಾರ್ಯಾರಂಭಗೊಂಡರೆ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ಇರುವುದಿಲ್ಲ ಎಂದರು.

ಸ್ಮಶಾನ, ಸರ್ಕಾರಿ ಶಾಲೆಯಲ್ಲಿ ಶೌಚಗೃಹ ವ್ಯವಸ್ಥೆ ಸೇರಿದಂತೆ ಗ್ರಾಮಸ್ಥರ ಹಲವು ಸಮಸ್ಯೆಗಳ ಕುರಿತು ಪರಿಶೀಲಿಸಿ ತುರ್ತಾಗಿ ಕ್ರಮ ಕೈಗೊಳ್ಳವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿವರ್ಷ ಅಂಬೇಡ್ಕರ್ ಜಯಂತಿ ಹಿಂದಿನ ದಿನ ದಲಿತರ ಮನೆಯಲ್ಲಿ ಗ್ರಾಮ ವಾಸ್ತವ್ಯ ನಡೆಸುವುದನ್ನು ಹಲವಾರು ವರ್ಷಗಳಿಂದ ಪಾಲಿಸಿಕೊಂಡು ಬರುತ್ತಿದ್ದು ಈ ಬಾರಿ ಗ್ರಾಮದ ಸೋಮಣ್ಣ ಅವರ ಮನೆಯಲ್ಲಿ ವಾಸ್ತವ್ಯ ಕೈಗೊಂಡಿರುವುದಾಗಿ ಹೇಳಿದರು.

 

Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…