More

    ಹೆದ್ದಾರಿಯಲ್ಲಿ ಸೃಷ್ಟಿಯಾಯಿತು ಕಾವೇರಿ ಕಾರಂಜಿ; ನದಿಯಂತಾದ ಬೆಂಗಳೂರು-ಮೈಸೂರು ರಸ್ತೆ..

    ಮಂಡ್ಯ: ಹೆದ್ದಾರಿಯಲ್ಲಿ ಸೃಷ್ಟಿಯಾದ ಕಾರಂಜಿಯಿಂದಾಗಿ ರಸ್ತೆಯೂ ನದಿಯಂತಾಗಿ ಅಪಾರ ಪ್ರಮಾಣದ ಕುಡಿಯುವ ನೀರು ಪೋಲಾದ ಪ್ರಕರಣವೊಂದು ವರದಿಯಾಗಿದೆ.

    ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಲೋಕಪಾವನಿ ನದಿ ಸೇತುವೆ ಬಳಿ ಈ ಕಾರಂಜಿ ಉಂಟಾಗಿದೆ. ಕಾವೇರಿ ನದಿಯಿಂದ ಮಂಡ್ಯಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್​ನಲ್ಲಿ ಒಡಕು ಕಾಣಿಸಿಕೊಂಡಿದ್ದರಿಂದ ಅದರೊಳಗಿಂದ ನೀರು ಕಾರಂಜಿಯಂತೆ ಚಿಮ್ಮಿ ಹರಿದಿದೆ.

    ನೀರಿನ ಒತ್ತಡಕ್ಕೆ ಅದು ಕೊಳವೆಯಿಂದ ಮೇಲಕ್ಕೆ ಕಾರಂಜಿಯಂತೆಯೇ ಚಿಮ್ಮಿದ್ದು, ಸುಮಾರು 30 ನಿಮಿಷಗಳ ಕಾಲ ನೀರು ಪೋಲಾಗಿದೆ. ಉಕ್ಕಿ ಹರಿದ ನೀರೆಲ್ಲ ರಸ್ತೆಯಲ್ಲಿ ನದಿಯಂತೆ ಹರಿದುಹೋಗಿದೆ. ಪರಿಣಾಮವಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಕೆಲಕಾಲ ಅಡಚಣೆ ಎದುರಿಸುವಂತಾಗಿತ್ತು. ಜಲಮಂಡಳಿ ಸಿಬ್ಬಂದಿ ಪೈಪ್ ಸರಿಪಡಿಸಿ ನೀರು ಪೋಲಾಗುವುದನ್ನು ನಿಲ್ಲಿಸಿದ್ದಾರೆ.

    ಟೇಬಲ್ ಮೇಲಿತ್ತು ಮೂರು ಟೀ ಕಪ್​; ದಂಪತಿಯನ್ನು ಪರಿಚಿತರೇ ಕೊಂದರಾ?

    ಕಷ್ಟ ಎಂದು ಕಿಡ್ನಿ ಮಾರಲಿಕ್ಕೆ ಮುಂದಾದ ಮಹಿಳೆಗೇ ಮೋಸ ಮಾಡಿದ್ರು; ನಯವಾಗೇ 7.97 ಲಕ್ಷ ರೂ. ಪಡೆದ ಸೈಬರ್ ವಂಚಕರು

    ಚಿತ್ರನಟಿಗೆ ಮನೆಯಲ್ಲೇ ತಾಳಿ ಕಟ್ಟಿ ಗಂಡನಂತೆ ನಟಿಸಿದ; ಬಳಿಕ ನಗ-ನಗದಿನೊಂದಿಗೆ ಪರಾರಿಯಾದ ರೌಡಿಯ ಅಣ್ಣ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts