More

    1.5 ಕೋಟಿ ರೂ. ವೆಚ್ಚದಲ್ಲಿ 4 ಕೆರೆಗಳ ಅಭಿವೃದ್ಧಿ

    ಕಡೂರು: ಕ್ಷೇತ್ರದ ನಾಲ್ಕು ದೊಡ್ಡ ಕೆರೆಗಳ ಅಭಿವೃದ್ಧಿಗಾಗಿ ಜಲಾಮೃತ ಯೋಜನೆಯಡಿ 1.5 ಕೋಟಿ ರೂ. ಮಂಜೂರಾಗಿದೆ ಎಂದು ಶಾಸಕ ಬೆಳ್ಳಿಪ್ರಕಾಶ್ ತಿಳಿಸಿದರು.

    ತಾಲೂಕಿನ ಯಳ್ಳಂಬಳಸೆ ಗ್ರಾಮದಲ್ಲಿ ಸೋಮವಾರ ಜಲಾಮೃತ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರ್ಜಲ ಅಭಿವೃದ್ಧಿಗಾಗಿ ಜಲಾಮೃತ ಯೋಜನೆಯಡಿ ಯಳ್ಳಂಬಳಸೆ, ಚಿಕ್ಕಪಟ್ಟಣಗೆರೆ, ವಿಷ್ಣುಸಮುದ್ರ ಮತ್ತು ಜೋಡಿತಿಮ್ಮಾಪುರ ಕೆರೆಗಳನ್ನು ಆಯ್ಕೆ ಮಾಡಲಾಗಿದೆ. ಕೆರೆಯ ಏರಿ ಸ್ವಚ್ಛ ಮತ್ತು ಹೊಳು ತೆಗೆಯುವ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

    ಕ್ಷೇತ್ರದಲ್ಲಿ ಅಂತರ್ಜಲ ವೃದ್ಧಿ, ಜನ-ಜಾನುವಾರಿಗೆ ಕುಡಿಯುವ ನೀರಿಗೆ ಸಂಬಂಧಿಸಿ ಎಲ್ಲಾ ಇಲಾಖೆಗಳಿಂದ ಕಾರ್ಯಕ್ರಮ ಮಂಜೂರು ಮಾಡಿಸಲು ಪ್ರಯತ್ನ ನಡೆಸಲಾಗಿದೆ. ಮುಖ್ಯಮಂತ್ರಿಗಳು ಕಡೂರು ಕ್ಷೇತ್ರದ ಬಗ್ಗೆ ವಿಶೇಷ ಒತ್ತು ನೀಡಿದ್ದಾರೆ. ನಮ್ಮ ಮೀತಿಯಲ್ಲಿ ನಿರಾವರಿಗೆ ಹೆಚ್ಚಿನ ಅದ್ಯತೆ ನೀಡಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts