ನವದೆಹಲಿ: ಕಾನೂನಿನ ನೇಣು ಕುಣಿಕೆಯಿಂದ ಪಾರಾಗಲು ಅಪರಾಧಿಗಳು ಏನೇ ತಂತ್ರಗಳನ್ನು ಹೂಡಿದರೂ ಸಹ ನಿರ್ಭಯಾಳ ಅಮಾನವೀಯ ಸಾವಿನ ಪಾಪದಿಂದ ಅತ್ಯಾಚಾರಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಈ ದಿನ ನೆನಪಿಸಿದೆ.
ಇಂದು ಬೆಳ್ಳಂಬೆಳಗ್ಗೆಯಷ್ಟೇ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಅಪರಾಧಿಗಳನ್ನು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿದೆ. ತಡವಾದರೂ ಸರಿಯೇ, ಆದರೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬುದನ್ನು ನಮ್ಮ ಕಾನೂನು ವ್ಯವಸ್ಥೆ ತೋರಿಸಿಕೊಟ್ಟಿದೆ. ಸುದೀರ್ಘ 7 ವರ್ಷ ಕಾಯ್ದಿದ್ದ ನಿರ್ಭಯಾ ಪಾಲಕರಿಗೆ ಕೊನೆಗೂ ನ್ಯಾಯ ಸಿಕ್ಕಿದ್ದು, ಸಂತ್ರಸ್ತೆ ನಿರ್ಭಯಾ ಸಾವಿಗೂ ನ್ಯಾಯ ದೊರಕಿದೆ.
ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ನಿರ್ಭಯಾ ತಾಯಿ ಆಶಾ ದೇವಿ, ನಾನು ಕಾನೂನು ಹೋರಾಟ ಮುಂದುವರಿಸುತ್ತೇವೆ. ಭವಿಷ್ಯದಲ್ಲಿ ಇಂತಹ ಪ್ರಕರಣಗಳಲ್ಲಿ ಅಪರಾಧಿಗಳು ಯಾವುದೇ ತಂತ್ರಗಳನ್ನು ಹೂಡಿ ಶಿಕ್ಷೆಯನ್ನು ವಿಳಂಬ ಮಾಡದಂತೆ ಮಾರ್ಗಸೂಚಿ ಹೊರಡಿಸುವಂತೆ ಸುಪ್ರೀಂಕೋರ್ಟ್ನಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್, ಪವನ್ ಕುಮಾರ್ ಗುಪ್ತ, ವಿನಯ್ ಕುಮಾರ್ ಶರ್ಮ ಮತ್ತು ಅಕ್ಷಯ್ ಕುಮಾರ್ ಸಿಂಗ್ರನ್ನು ಇಂದು ಬೆಳಗ್ಗೆ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.
23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ಡಿಸೆಂಬರ್ 16, 2012ರಂದು ಬಾಲಾಪಾರಾಧಿ ಸೇರಿದಂತೆ ಒಟ್ಟು ಆರು ಮಂದಿ ಮೃಗೀಯವಾಗಿ ಅತ್ಯಾಚಾರವೆಸಗಿ, ಕೊಲೆಗೈದು ವಿಕೃತಿ ಮೆರೆದಿದ್ದರು.
ಒಟ್ಟು ಆರು ಅಪರಾಧಿಗಳಲ್ಲಿ ರಾಮ ಸಿಂಗ್ ತಿಹಾರ್ ಜೈಲಿನಲ್ಲೇ 2013 ಮಾರ್ಚ್ನಲ್ಲಿ ಪಾಪಾಪ್ರಜ್ಞೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ. ಮತ್ತೊಬ್ಬ ಬಾಲಾಪಾರಾಧಿಯನ್ನು ಅಪರಾಧ ನಡೆದ ಮೂರು ವರ್ಷಗಳ ಬಳಿಕ ಬಿಡುಗಡೆ ಮಾಡಲಾಗಿತ್ತು. (ಏಜೆನ್ಸೀಸ್)
ನಿರ್ಭಯಾ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು: ತಾಯಿ ಆಶಾದೇವಿ ಅವರ ಮೊದಲ ಪ್ರತಿಕ್ರಿಯೆ ಇದಾಗಿತ್ತು..
ತಿಹಾರ್ ಜೈಲಿನಲ್ಲಿ ನೇಣುಗಂಬಕ್ಕೆ ಏರಿದ ನಿರ್ಭಯಾ ಅತ್ಯಾಚಾರ ಅಪರಾಧಿಗಳು; ಮಾಡಿದ ಪಾಪಕ್ಕೆ ಕುಣಿಕೆಯಲ್ಲಿ ಹೋಯ್ತು ಜೀವ