ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಗುರುವಾರವೂ ಬೆಂಗಳೂರು ಸೇರಿ ರಾಜ್ಯದ ಇನ್ನಿತರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೀದರ್, ಕಲಬುರಗಿ, ಬಳ್ಳಾರಿ, ಬಾಗಲಕೋಟೆ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ಗದಗದಲ್ಲಿ ನ.5,6ರಂದು ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ: ಪಟಾಕಿ ತರುವಾಗ ಎಚ್ಚರ; ಅಪ್ಪ-ಮಗ ಇಬ್ಬರನ್ನೂ ಬಲಿ ಪಡೆಯಿತು ಇದೊಂದು ತಪ್ಪು!
ನ. 7, 8ರಂದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
3 ವರ್ಷದ ಹಿಂದೆ ಮದ್ವೆಯಾಗಿದ್ದ ಮಹಿಳೆ ಆತ್ಮಹತ್ಯೆ; ಕೊಲೆ ಎಂದು ಪಾಲಕರ ಆರೋಪ