More

    ನೇಕಾರರ ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಬೆಸ್ಕಾಂ

    ದೊಡ್ಡಬಳ್ಳಾಪುರ: ನಗರದಲ್ಲಿ ನೇಕಾರರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ಬೆಸ್ಕಾಂ ಸಿಬ್ಬಂದಿ ಕ್ರಮ ಖಂಡಿಸಿ ನೇಕಾರರು ಬೆಸ್ಕಾಂ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

    ಲಾಕ್‌ಡೌನ್‌ನಿಂದ ನೇಕಾರ ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನೇಯ್ದ ಸೀರೆಗಳಿಗೆ ಮಾರುಕಟ್ಟೆ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂಥ ಸಂಧರ್ಭದಲ್ಲಿ ನೇಕಾರರಿಗೆ ಸಂಬಂಧಿಸಿದ ಮಗ್ಗದ ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ಜವಳಿ ಸಚಿವರು ಸೂಚಿಸಿದ್ದಾರೆ. ಆದರೂ ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿ ನೇಕಾರರ ಸಮುದಾಯದ ಗಾಯದ ಮೇಲೆ ಬರೆ ಎಳೆಯುತ್ತಿದ್ದಾರೆ. ಕೂಡಲೆ ವಿದ್ಯುತ್ ಸಂಪರ್ಕವನ್ನು ಮರುಸ್ಥಾಪಿಸಬೇಕು ಎಂದು ನೇಕಾರ ಮುಖಂಡ ಪಿ. ವೆಂಕಟೇಶ್ ಆಗ್ರಹಿಸಿದರು.

    ಮೇಲಧಿಕಾರಿಗಳ ಆದೇಶದಂತೆ ಕೆಲಸ ಮಾಡುತ್ತಿದ್ದೇವೆ. ವಿದ್ಯುತ್ ಕಡಿತಗೊಳಿಸಬಾರದು ಎಂದು ಯಾವುದೇ ಆದೇಶ ಬಂದಿಲ್ಲ. ನೇಕಾರರ ಮನವಿಯಂತೆ ಸದ್ಯಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದನ್ನು ನಿಲ್ಲಿಸಿದ್ದೇವೆ. ಜಿಲ್ಲಾಧಿಕಾರಿ ಅವರ ಸಭೆಯ ಬಳಿಕ ಮೇಲಧಿಕಾರಿಗಳಿಂದ ಬರುವ ಆದೇಶ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
    ಎನ್. ರೋಹಿತ್
    ಬೆಸ್ಕಾಂ ದೊಡ್ಡಬಳ್ಳಾಪುರ ಎಇಇ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts