ನವದೆಹಲಿ: ಕೋವಿಡ್ 19 ಸಂಕಷ್ಟದಿಂದಾಗಿ ಇಡೀ ಅರ್ಥವ್ಯವಸ್ಥೆ ತಾಳತಪ್ಪಿದ್ದು, ಕೇಂದ್ರ ಸರ್ಕಾರ ಆರಂಭದಲ್ಲಿ ಮೂರು ತಿಂಗಳು ಲೋನ್ ಮೊರಟೋರಿಯಂ ಘೋಷಿಸಿತ್ತು. ನಂತರದಲ್ಲಿ ಮತ್ತೆ ಮೂರು ತಿಂಗಳು ವಿಸ್ತರಣೆಮಾಡಿತ್ತು. ಈಗ ಈ ಅವಧಿಯನ್ನು ಎರಡು ವರ್ಷದ ತನಕ ವಿಸ್ತರಿಸಬಹುದು ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮಂಗಳವಾರ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮತ್ತು ಆರ್ಬಿಐ ಪರವಾಗಿ ಕೋರ್ಟ್ಗೆ ಹಾಜರಾದ ಸೋಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ವಿಷಯವನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಸಂಕಷ್ಟಕ್ಕೀಡಾಗಿರುವ ಸೆಕ್ಟರ್ಗಳ ನೆರವಿಗೆ ಸರ್ಕಾರ ಧಾವಿಸಿದ್ದು, ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ. ಸಾಂಕ್ರಾಮಿಕದ ಕಾರಣಕ್ಕೆ ಆರ್ಥಿಕತೆ ಶೇಕಡ 23 ಕುಸಿತ ಕಂಡಿದೆ. ಇದನ್ನು ಮೇಲೆತ್ತುವುದಕ್ಕೂ ಪ್ಯಾಕೇಜ್ಗಳನ್ನು ಘೋಷಿಸಿ, ಅನುಷ್ಠಾನಗೊಳಿಸುತ್ತಿದೆ.
ಇದನ್ನೂ ಓದಿ: ಐವರು ನಕ್ಸಲರ ಬಂಧನ, ಜೈಲ್ಲಿನಲ್ಲಿದ್ದ ನಕ್ಸಲ್ ಒಬ್ಬನ ಸಾವು
ಮೊರಟೋರಿಯಂ ಅವಧಿಯಲ್ಲೂ ಬ್ಯಾಂಕುಗಳು ಸಾಲದ ಮೇಲೆ ಬಡ್ಡಿ, ಆ ಬಡ್ಡಿಯ ಮೇಲೆ ಬಡ್ಡಿ ವಿಧಿಸುತ್ತಿರುವ ಬಗ್ಗೆ ಪ್ರಶ್ನಿಸಿ ಸಲ್ಲಿಸಿದ ಅನೇಕ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದ್ದ ನ್ಯಾಯಪೀಠ, ಈ ಕುರಿತ ಇನ್ನಷ್ಟು ವಿಚಾರಣೆಯನ್ನು ನಾಳೆ ನಡೆಸುವುದಾಗಿ ಘೋಷಿಸಿದೆ. ಇದಕ್ಕೂ ಮುನ್ನ, ಈ ವಿಷಯವನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರ ಮತ್ತು ಆರ್ಬಿಐಗೆ ಸೂಚಿಸಿತ್ತು. (ಏಜೆನ್ಸೀಸ್)
ಬೇಗೂರಿನ ವಿಶ್ವಪ್ರಿಯ ಲೇಔಟ್ನಲ್ಲಿ ಗಾಂಜಾ ಮಾರುತ್ತಿದ್ದವರು ಪೊಲೀಸ್ ಬಲೆಗೆ