ಇನ್ನು ರಾಜಧಾನಿಯಲ್ಲಿ ವೀಕೆಂಡ್​ ಕರ್ಫ್ಯೂ

ನವದೆಹಲಿ : ಕರೊನಾ ಸೋಂಕು ಉಲ್ಬಣವನ್ನು ನಿಯಂತ್ರಿಸಲು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಆದಾಗ್ಯೂ ಅಗತ್ಯ ಸೇವೆಗಳಿಗೆ ಯಾವುದೇ ಅಡ್ಡಿಆತಂಕ ಉಂಟಾಗುವುದಿಲ್ಲ ಎಂದಿದ್ದಾರೆ. ವಾರಾಂತ್ಯದಲ್ಲಿ ಅಂದರೆ ಶನಿವಾರ ಮತ್ತು ಭಾನುವಾರದಂದು ಜನಸಂಚಾರವನ್ನು ಮಿತಗೊಳಿಸಿ ಸೋಂಕನ್ನು ಹತೋಟಿಗೆ ತರಲು ಕರ್ಫ್ಯೂ ಆದೇಶ ಹೊರಡಿಸುತ್ತಿರುವುದಾಗಿ ತಿಳಿಸಿರುವ ಕೇಜ್ರಿವಾಲ್, ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗುವುದು ಮತ್ತು ಈಗಾಗಲೇ ನಿಗದಿಯಾಗಿರುವ ಮದುವೆ ಸಮಾರಂಭಗಳಿಗೆ ವಿಶೇಷ ಪಾಸ್​ಗಳನ್ನು ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: … Continue reading ಇನ್ನು ರಾಜಧಾನಿಯಲ್ಲಿ ವೀಕೆಂಡ್​ ಕರ್ಫ್ಯೂ