More

    ಸಂವಿಧಾನ ಜಾಗೃತಿ ರಥಕ್ಕೆ ಸ್ವಾಗತ


    • ಕೊಡಗು : ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ಎದುರು ಶನಿವಾರ ಸ್ವಾಗತಿಸಲಾಯಿತು.

    • ಸಂವಿಧಾನ ಜಾಗೃತಿ ರಥದೊಂದಿಗೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ- ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂವಿಧಾನ ಘೋಷವಾಕ್ಯದೊಂದಿಗೆ ಶೋಭಾಯಾತ್ರೆ ನಡೆಸಿದರು.

    • ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್ ಮಾತನಾಡಿ, ಭಾರತದಲ್ಲಿ ಲಿಖಿತ ಸಂವಿಧಾನ ಇದ್ದು, ಜನರು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಕರೆ ನೀಡಿದರು.

    • ಐಗೂರು ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ಕೆ.ಉಮೇಶ್ ಮಾತನಾಡಿ, ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಸಮಬಾಳು ನೀತಿ ಇದೆ. ಸಹಬಾಳ್ವೆಯ ಮೂಲಕ ಜೀವನ ನಡೆಸಿದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸುವುದರೊಂದಿಗೆ ಸಂವಿಧಾನದ ಆಶಯಗಳಿಗೆ ನಾವು ಗೌರವ ನೀಡಿದಂತಾಗುತ್ತದೆ ಎಂದರು.
    • ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೌರಮ್ಮ, ಸದಸ್ಯರಾದ ಲಿಂಗೇರಿ ರಾಜೇಶ್, ಜುನೈದ್, ಬೇಬಿ, ಜಾನಕಿ, ಜೋಯಪ್ಪ, ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts