More

    ಹುಬ್ಬಳ್ಳಿಯಲ್ಲಿ ಉಪರಾಷ್ಟ್ರಪತಿಗೆ ಸ್ವಾಗತ

    ಹುಬ್ಬಳ್ಳಿ: ಹೊಸಪೇಟೆ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಕೈಗೊಂಡಿರುವ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಪತ್ನಿ ಎಂ. ಉಷಾ ಅವರೊಂದಿಗೆ ಶುಕ್ರವಾರ ವಾಯುಸೇನೆಯ ವಿಶೇಷ ವಿಮಾನದಲ್ಲಿ ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
    ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ, ಮಾಜಿ ಮುಖ್ಯಮಂತ್ರಿ ಶಾಸಕ ಜಗದೀಶ ಶೆಟ್ಟರ್ ಅವರು ವೆಂಕಯ್ಯ ನಾಯ್ಡು ಅವರನ್ನು ಬರಮಾಡಿಕೊಂಡು ಶಾಲು, ಯಾಲಕ್ಕಿ ಹಾರ ಹಾಕಿ, ಪುಸ್ತಕ ನೀಡಿ ಗೌರವಿಸಿದರು.
    ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹುಬ್ಬಳ್ಳಿ- ಧಾರವಾಡ ನಗರ ಪೊಲೀಸ್ ಆಯುಕ್ತ ಲಾಭೂರಾಮ ಅವರು ಪುಸ್ತಕಗಳನ್ನು ನೀಡಿ ಗೌರವ ಸಲ್ಲಿಸಿದರು.
    ಬಳಿಕ ವಿಮಾನ ನಿಲ್ದಾಣದಿಂದಲೇ ಉಪ ರಾಷ್ಟ್ರಪತಿಯವರು ನೇರವಾಗಿ ಭಾರತೀಯ ವಾಯುಸೇನೆಯ ವಿಶೇಷ ಹೆಲಿಕಾಪ್ಟರ್ ಮೂಲಕ ಹೊಸಪೇಟೆಗೆ ತೆರಳಿದರು. ವಿಮಾನ ನಿಲ್ದಾಣ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
    ಹುಬ್ಬಳ್ಳಿಗೆ ನಾಳೆ: ಉಪರಾಷ್ಟ್ರಪತಿಯವರು ಆ. 22ರಂದು ಬೆಳಗ್ಗೆ 9.50ಕ್ಕೆ ಹುಬ್ಬಳ್ಳಿಗೆ ಬಂದು, 10.05ಕ್ಕೆ ಅನಂತ ಗ್ರ್ಯಾಂಡ್ ಹೋಟೆಲ್​ನಲ್ಲಿ ನಿಗದಿಯಾಗಿರುವ ಖಾಸಗಿ ಕಾರ್ಯಕ್ರಮಕ್ಕೆ ತೆರಳುವರು. 10.25ಕ್ಕೆ ದೆಹಲಿಗೆ ಪ್ರಯಾಣ ಬೆಳೆಸುವರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts