ಕಲಬುರಗಿ: ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಅಣ್ಣ-ತಮ್ಮ ಇಬ್ಬರೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ದುರ್ಘಟನೆ ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ಸಂಭವಿಸಿದ್ದು, ಸಹೋದರರಾದ ಸುನೀಲ್ (17) ಮತ್ತು ಶೇಖರ್(12) ಮೃತಪಟ್ಟಿದ್ದಾರೆ. ಇದನ್ನೂ ಓದಿರಿ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ: ನವದಂಪತಿ ಸ್ಥಳದಲ್ಲೇ ಸಾವು
ಮನೆಯಲ್ಲಿ ತಂದೆ-ತಾಯಿಯೊಂದಿಗೆ ಜಗಳ ಮಾಡಿಕೊಂಡಿದ್ದ ಸಹೋದರರು ಬಳಿಕ ಕೃಷಿ ಜಮೀನಿನ ಬಳಿ ಬಳಿ ಬಂದು ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ್ದಾರೆ. ಇವರಿಬ್ಬರಿಗೂ ಈಜು ಬರುತಿತ್ತು. ಹಾಗಾಗಿ ಕಲ್ಲು ಕಟ್ಟಿಕೊಂಡು ಸಾವಿನ ಮನೆಯ ಕದ ತಟ್ಟಿದ್ದಾರೆ.
ಸಹೋದರರಿಬ್ಬ ಆತ್ಮಹತ್ಯೆ ಸುದ್ದಿ ಸುಳಿಯುತ್ತಿದ್ದ ಊರಿಗೆ ಊರೆ ಬಾವಿ ಬಳಿ ಬೀಡುಬಿಟ್ಟಿತ್ತು. ಹೆತ್ತವರು-ಕುಟುಂಬಸ್ಥರ ಗೋಳಾಟ ಮನಕಲಕುವಂತಿತ್ತು. ರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್ಕ್ಲೂಸಿವ್ ಫೋಟೋಸ್
ವರ್ಷಾಚರಣೆಗೆ ಕೇಕ್ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ