ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ, ಸಂಸದ ದಿಲೀಪ್ ಘೋಷ್ ಅವರ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ.
ಇಂದು ಕೋಲ್ಕತ್ತಾದ ನ್ಯೂಟೌನ್ನಲ್ಲಿ ಘಟನೆ ನಡೆದಿದೆ. ದಿಲೀಪ್ ಘೋಷ್ ಮತ್ತು ಅವರ ಭದ್ರತಾ ಸಿಬ್ಬಂದಿಯ ಕಾರುಗಳನ್ನು ಅಡ್ಡಗಟ್ಟಿ, ವಾಹನಗಳನ್ನೆಲ್ಲ ಧ್ವಂಸ ಮಾಡಿದ್ದಾರೆ. ಅದಾದ ನಂತರ ದಿಲೀಪ್ ಘೋಷ್ ಅವರನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತನೋರ್ವನ ಮನೆಗೆ ಕರೆದುಕೊಂಡು ಹೋಗಿ ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಪತಂಜಲಿಯ ‘ಕರೊನಿಲ್’: ಬಾಬಾ ರಾಮ್ದೇವ್
ಘೋಷ್ ಅವರು ಚಾಯ್ ಪೆ ಚರ್ಚಾ ಸಮಾರಂಭ ಆಯೋಜಿಸುವ ಸಲುವಾಗಿ ತಮ್ಮ ಒಂದಷ್ಟು ಬೆಂಬಲಿಗರೊಂದಿಗೆ ತೆರಳುತ್ತಿದ್ದರು. ನ್ಯೂಟೌನ್ ಬಳಿ ತೃಣಮೂಲ ಕಾಂಗ್ರೆಸ್ನ ಕೆಲವು ಕಾರ್ಯಕರ್ತರು ಒಮ್ಮೆಲೆ ಇವರ ಜತೆ ಗಲಾಟೆಗೆ ಇಳಿದಿದ್ದಾರೆ.
ಘೋಷ್ ಅವರ ಮೇಲೆ ದಾಳಿ ಮಾಡಿದ್ದಾರೆ. ಹಾಗೇ ಬಿಜೆಪಿ ಕಾರ್ಯಕರ್ತರ ಕಾರುಗಳ ಗ್ಲಾಸ್ಗಳನ್ನೆಲ್ಲ ಒಡೆದು ಧ್ವಂಸ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ಈ ಹಲ್ಲೆಯ ಹಿಂದೆ ಟಿಎಂಸಿಯ ನಾಯಕ ಮೊಹ್ಸಿನ್ ಘಾಜಿ ಇದ್ದಾರೆಂದು ದಿಲೀಪ್ ಘೋಷ್ ಅವರು ಆರೋಪಿಸಿದ್ದಾರೆ. ಆದರೆ ಟಿಎಂಸಿ ಈ ಆರೋಪವನ್ನು ತಳ್ಳಿ ಹಾಕಿದೆ. ಬಿಜೆಪಿ ಬೇಕೆಂದೇ ಟಿಎಂಸಿ ಹೆಸರು ಹೇಳುತ್ತಿದೆ. ನಮ್ಮ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೆಳಗ್ಗೆ ಸೆಕ್ಷನ್ 144, ರಾತ್ರಿ ಕರ್ಫ್ಯೂ; ಹೊರಗೆ ಬಂದ್ರೆ ಕರೊನಾನೂ ಬಿಡಲ್ಲ, ಪೊಲೀಸರು ಸುಮ್ಮನಿರಲ್ಲ
ದಿಲೀಪ್ ಘೋಷ್ ಅವರ ಮೇಲಿನ ದಾಳಿಯನ್ನು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಖಂಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಪ್ರತಿಪಕ್ಷಗಳ ನಾಯಕರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಪದೇಪದೆ ಹೀಗೆ ದಾಳಿ, ಹಲ್ಲೆಗಳು ನಡೆಯುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)