ನವದೆಹಲಿ: ಪೂರ್ವ ಲಡಾಖ್ನ ಗಡಿಯಲ್ಲಿ ಕಾಲುಕೆರೆದು ಜಗಳಕ್ಕೆ ನಿಂತಿದ್ದ ಚೀನಾ ಅಲ್ಲಿನ ಗೋಗ್ರಾ, ಹಾಟ್ಸ್ಪ್ರಿಂಗ್, ಪ್ಯಾಂಗ್ಯಾಂಗ್ಗಳಲ್ಲಿ ತನ್ನ ಸೈನಿಕರನ್ನು ಜಮಾವಣೆ ಮಾಡಿತ್ತು.
ನಂತರ ಭಾರತ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾ ವಿದೇಶಾಂಗ ವ್ಯವಹಾರಗಳ ಸಚಿವ ವಾಂಗ್ ಯಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು.
ವಾಸ್ತವ ಗಡಿ ನಿಯಂತ್ರಣಾ ರೇಖೆ (ಎಲ್ಎಸಿ) ಬಳಿ ಶಾಂತಿ ಸ್ಥಾಪನೆ ಕುರಿತಂತೆ ನಡೆದ ಚರ್ಚೆಯ ಬಳಿಕ ಚೀನಾ ತನ್ನ ಸೈನಿಕರನ್ನು ಹಿಂದಕ್ಕೆ ಕರೆಸಿಕೊಂಡಿತ್ತು. ಗಲ್ವಾನ್, ಗೋಗ್ರಾ, ಹಾಟ್ಸ್ಪ್ರಿಂಗ್, ಪ್ಯಾಂಗಾಂಗ್ ತ್ಸೋ ಬಳಿಯಿಂದ ಚೀನಾ ಸೈನಿಕರು ಹಿಂದಕ್ಕೆ ಸರಿದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿತ್ತು.
ಆದರೆ ಭಾರತೀಯ ಸೇನೆಯಲ್ಲಿ ಈ ಹಿಂದೆ ಕರ್ನಲ್ ಆಗಿದ್ದ ಅಜಯ್ ಶುಕ್ಲಾ ಎಂಬುವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಚೀನಾ ಸೈನಿಕರನ್ನು ಹಿಂದಕ್ಕೆ ಕರೆಸಿಕೊಂಡ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾ ಪ್ರದೇಶದಿಂದ ಚೀನಾ ತನ್ನ ಸೈನಿಕರನ್ನು ಹಿಂದಕ್ಕೆ ಕರೆಸಿಕೊಂಡಿಲ್ಲ. ನನಗೆ ಕೆಲವು ಖಚಿತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಅದೆರಡೂ ಪ್ರದೇಶಗಳಿಂದ ಚೀನಾ ತನ್ನ ಸೈನಿಕರನ್ನು ವಾಪಸ್ ಕರೆಸಿಕೊಳ್ಳಲು ನಿರಾಕರಿಸಿದೆ. ಕೇಂದ್ರ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ ಎಂದು ಅಜಯ್ ಶುಕ್ಲಾ ಹೇಳಿದ್ದಾರೆ. ಇದನ್ನೂ ಓದಿ: ಗುಣಮುಖರಾಗಿದ್ದಾರೆ 106 ಸೋಂಕಿತರು ; ಶನಿವಾರ 25 ಜನರಿಗೆ ಸೋಂಕು ದೃಢ
ಅಜಯ್ ಶುಕ್ಲಾ ಅವರ ಸಂದರ್ಶನದ ಪತ್ರಿಕಾ ವರದಿಯನ್ನು ತನ್ನ ಟ್ವಿಟರ್ನಲ್ಲಿ ಪೋಸ್ಟ್ ಮಾಡಿಕೊಂಡಿರುವ ರಾಹುಲ್ ಗಾಂಧಿ, ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಏನು ನಡೆಯುತ್ತಿದೆ? ನಮ್ಮ ಭಾರತ ಮಾತೆಯ ಪವಿತ್ರ ಭೂಮಿಯನ್ನು ಚೀನಾ ಕಬಳಿಸಿದೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕೂಡ ರಾಹುಲ್ ಗಾಂಧಿ, ಚೀನಾಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.(ಏಜೆನ್ಸೀಸ್)
ವಿಕಾಸ್ ದುಬೆ ಎನ್ಕೌಂಟರ್ ವೇಳೆ ಗಾಯಗೊಂಡಿದ್ದ ಪೊಲೀಸ್ ಪೇದೆ ಆಸ್ಪತ್ರೆಗೆ ಹೋದಾಗ ಕಾದಿತ್ತು ಶಾಕ್ !