ನವದೆಹಲಿ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಿಗದಿಯಾಗಿರುವ ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಕಳುಹಿಸುವುದಿಲ್ಲ. ಹೀಗಾಗಿ ಟೂರ್ನಿ ಸ್ಥಳಾಂತರಿಸಲಾಗುವುದು ಎಂಬ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಹೇಳಿಕೆ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ಈ ಕುರಿತು ಕೇಳಲಾದ ಪ್ರಶ್ನೆಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.
ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ನಾವೀಗ ವಿಶ್ವಕಪ್ ಮೇಲೆ ಮಾತ್ರ ಗಮನ ಹರಿಸುತ್ತಿದ್ದೇವೆ. ಸದ್ಯಕ್ಕೆ ಇದುವೇ ನಮ್ಮ ಪ್ರಾಮುಖ್ಯತೆಯಾಗಿದೆ. ಮುಂದೆ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನಮಗೆ ಚಿಂತೆಯಿಲ್ಲ. ಆ ಬಗ್ಗೆ ಯೋಚಿಸುವ ಅಗತ್ಯವೂ ಇಲ್ಲ. ಅದರ ಬಗ್ಗೆ ಬಿಸಿಸಿಐ ನಿರ್ಧಾರ ಮಾಡುತ್ತದೆ. ನಾವು ನಾಳೆ ಪಾಕಿಸ್ತಾನದ ವಿರುದ್ಧ ನಡೆಯುವ ಪಂದ್ಯದ ಮೇಲಷ್ಟೇ ಗಮನ ಹರಿಸಿದ್ದೇವೆ ಎಂದು ರೋಹಿತ್ ತಿಳಿಸಿದರು.
ಮುಂಬೈನಲ್ಲಿ ಕಳೆದ ಮಂಗಳವಾರ ನಡೆದ ಬಿಸಿಸಿಐ ಎಜಿಎಂ ಬಳಿಕ ಮಾತನಾಡಿದ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಷಾ, ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಿಗದಿಯಾಗಿರುವ ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಕಳುಹಿಸುವುದಿಲ್ಲ. ಹೀಗಾಗಿ ಟೂರ್ನಿ ಸ್ಥಳಾಂತರಿಸಲಾಗುವುದು ಎಂದಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೊಸ ತಗಾದೆ ತೆಗೆದಿದೆ. ಈ ವಿಚಾರದ ಚರ್ಚೆಗೆ ತುರ್ತಾಗಿ ಎಸಿಸಿ ಸಭೆ ಕರೆಯಬೇಕೆಂದು ಮನವಿ ಸಲ್ಲಿಸಿದೆ. ಅಲ್ಲದೆ, 2023ರ ವಿಶ್ವಕಪ್ ಸಹಿತ ಭಾರತದಲ್ಲಿ ನಿಗದಿಯಾಗಿರುವ ಮುಂಬರುವ ಎಲ್ಲ ಐಸಿಸಿ ಟೂರ್ನಿಗಳಿಂದ ಹಿಂದೆ ಸರಿಯುವ ಬಗ್ಗೆಯೂ ಪರೋಕ್ಷ ಬೆದರಿಕೆ ಒಡ್ಡಿದೆ.
ರೋಹಿತ್ ಪಡೆ ನಾಳೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯವನ್ನು ಆಡಲಿದ್ದು, ನಾಳಿನ ಪಂದ್ಯದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಹೈವೋಲ್ಟೇಜ್ ಪಂದ್ಯಕ್ಕೆ ಸಾವಿರಾರು ಮಂದಿ ಸಾಕ್ಷಿಯಾಗಲಿದ್ದಾರೆ.
ಪಾಕ್ ಪಂದ್ಯದ ಬಳಿಕ ಅ.27ರಂದು ನೆದರ್ಲೆಂಡ್ ವಿರುದ್ಧ ಭಾರತ ಎರಡನೇ ಪಂದ್ಯವನ್ನು ಆಡಲಿದೆ. ನ.2ರಂದು ಬಾಂಗ್ಲಾದೇಶ ಮತ್ತು ನ.6ರಂದು ಜಿಂಬಾಬ್ವೆ ವಿರುದ್ಧ ಭಾರತ ಸೂಪರ್ 12 ಹಂತದಲ್ಲಿ ಕಾದಾಡಲಿದೆ. (ಏಜೆನ್ಸೀಸ್)
ಭಾರತ ಕ್ರಿಕೆಟ್ಗೆ ನೀಡಿರುವ ಕೊಡುಗೆಗಳನ್ನು ನಿರ್ಲಕ್ಷಿಸುವಂತಿಲ್ಲ: ಪಾಕ್ಗೆ ಕೇಂದ್ರ ಕ್ರೀಡಾ ಸಚಿವರ ತಿರುಗೇಟು
ರೋಜ್ಗಾರ್ ಮೇಳಕ್ಕೆ ಪ್ರಧಾನಿ ಮೋದಿ ಚಾಲನೆ: 75 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಣೆ
ಹೇರ್ ಪ್ರಾಡಕ್ಟ್ನಿಂದ ಗರ್ಭಾಶಯದ ಕ್ಯಾನ್ಸರ್: ಖಾಸಗಿ ಕಂಪನಿ ವಿರುದ್ಧ ದಾವೆ ಹೂಡಿದ ಮಹಿಳೆ