More

    ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ವೇನಲ್ಲಿ ವ್ಹೀಲಿಂಗ್: ನಾಲ್ವರ ಬಂಧನ, 2 ಬೈಕ್​ ವಶಕ್ಕೆ​

    ರಾಮನಗರ: ಸಾಲು ಸಾಲು ಅಪಘಾತಗಳಿಂದ ಅಪಖ್ಯಾತಿ ಗುರಿಯಾಗಿರುವ ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ವೇನಲ್ಲಿ ವ್ಹೀಲಿಂಗ್​ ಮಾಡುವ ಮೂಲಕ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಪುಂಡರನ್ನು ಕುಂಬಳಗೋಡು ಪೊಲೀಸರು ಬಂಧಿಸಿದ್ದಾರೆ.

    ನಾಲ್ವರು ಆರೋಪಿಗಳನ್ನು ಬಂಧಿಸಿ, ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪುಂಡರು ಕಳೆದ ನಾಲ್ಕೈದು ತಿಂಗಳಿಂದ ಎಕ್ಸ್​ಪ್ರೆಸ್​ವೇನಲ್ಲಿ ಆಗಾಗ ವ್ಹೀಲಿಂಗ್ ಮಾಡುತ್ತಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಕುಂಬಳಗೊಡು, ಬಿಡದಿ, ಕೆಂಗೇರಿ ರಸ್ತೆಯಲ್ಲಿ ಪುಂಡರು ವ್ಹೀಲಿಂಗ್​ ಮಾಡಿದ್ದರು.

    ಇದನ್ನೂ ಓದಿ: ವಿರೋಧದ ಮಧ್ಯೆಯೂ ಪ್ರಿಯಕರನನ್ನು ವರಿಸಿದ ಯುವತಿ: ರಕ್ಷಣೆ ಕೋರಿ ಠಾಣೆಗೆ ಹೋದವಳಿಗೆ ಕಾದಿತ್ತು ಆಘಾತ!​

    ಒನ್ ವೇಯಲ್ಲಿಯೂ ವ್ಹೀಲಿಂಗ್ ಮಾಡಿ ಹುಚ್ಚಾಟ ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿರುವುದನ್ನು ಗಮನಿಸಿ, ಅದರ ಮೂಲ ಹುಡುಕಿ ಪುಂಡರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಮೊಹಮ್ಮದ್ ಹುಸೇನ್, ವಾಸೀಂ ಖಾನ್, ಮುಜಾಮೀನ್ ಹಾಗೂ ಸುಲ್ತಾನ್ ಎಂದು ಗುರುತಿಲಾಗಿದೆ. ಬಂಧಿತರಿಂದ 2 ಬೈಕ್ ವಶಪಡಿಸಿಕೊಳ್ಳಲಾಗಿದೆ.

    ಈ ಸಂಬಂಧ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಅತಿಯಾಗಿ ಡ್ರೈಫ್ರೂಟ್ಸ್ ಸೇವಿಸ್ತೀರಾ? ಅದರಿಂದಾಗುವ ಅಡ್ಡಪರಿಣಾಮಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು

    ಥ್ರೆಡ್ಸ್​ ಆ್ಯಪ್​ ನಾಗಾಲೋಟಕ್ಕೆ ಬೆಚ್ಚಿಬಿದ್ರಾ ಎಲನ್​ ಮಸ್ಕ್​? ಮೆಟಾ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts