ರಾಮನಗರ: ಸಾಲು ಸಾಲು ಅಪಘಾತಗಳಿಂದ ಅಪಖ್ಯಾತಿ ಗುರಿಯಾಗಿರುವ ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ವ್ಹೀಲಿಂಗ್ ಮಾಡುವ ಮೂಲಕ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಪುಂಡರನ್ನು ಕುಂಬಳಗೋಡು ಪೊಲೀಸರು ಬಂಧಿಸಿದ್ದಾರೆ.
ನಾಲ್ವರು ಆರೋಪಿಗಳನ್ನು ಬಂಧಿಸಿ, ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪುಂಡರು ಕಳೆದ ನಾಲ್ಕೈದು ತಿಂಗಳಿಂದ ಎಕ್ಸ್ಪ್ರೆಸ್ವೇನಲ್ಲಿ ಆಗಾಗ ವ್ಹೀಲಿಂಗ್ ಮಾಡುತ್ತಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಕುಂಬಳಗೊಡು, ಬಿಡದಿ, ಕೆಂಗೇರಿ ರಸ್ತೆಯಲ್ಲಿ ಪುಂಡರು ವ್ಹೀಲಿಂಗ್ ಮಾಡಿದ್ದರು.
ಇದನ್ನೂ ಓದಿ: ವಿರೋಧದ ಮಧ್ಯೆಯೂ ಪ್ರಿಯಕರನನ್ನು ವರಿಸಿದ ಯುವತಿ: ರಕ್ಷಣೆ ಕೋರಿ ಠಾಣೆಗೆ ಹೋದವಳಿಗೆ ಕಾದಿತ್ತು ಆಘಾತ!
ಒನ್ ವೇಯಲ್ಲಿಯೂ ವ್ಹೀಲಿಂಗ್ ಮಾಡಿ ಹುಚ್ಚಾಟ ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿರುವುದನ್ನು ಗಮನಿಸಿ, ಅದರ ಮೂಲ ಹುಡುಕಿ ಪುಂಡರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಮೊಹಮ್ಮದ್ ಹುಸೇನ್, ವಾಸೀಂ ಖಾನ್, ಮುಜಾಮೀನ್ ಹಾಗೂ ಸುಲ್ತಾನ್ ಎಂದು ಗುರುತಿಲಾಗಿದೆ. ಬಂಧಿತರಿಂದ 2 ಬೈಕ್ ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
ಅತಿಯಾಗಿ ಡ್ರೈಫ್ರೂಟ್ಸ್ ಸೇವಿಸ್ತೀರಾ? ಅದರಿಂದಾಗುವ ಅಡ್ಡಪರಿಣಾಮಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು
ಥ್ರೆಡ್ಸ್ ಆ್ಯಪ್ ನಾಗಾಲೋಟಕ್ಕೆ ಬೆಚ್ಚಿಬಿದ್ರಾ ಎಲನ್ ಮಸ್ಕ್? ಮೆಟಾ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ