More

    ದೆಹಲಿ ಅಬಕಾರಿ ನೀತಿ ಪ್ರಕರಣ; ಮನೀಶ್​ ಸಿಸೋಡಿಯಾ ಪಾತ್ರದ ಕುರಿತು ಪುರಾವೆ ಕೇಳಿದ ಸುಪ್ರೀಂ ಕೋರ್ಟ್

    ನವದೆಹಲಿ: 2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳಾದ ಇಡಿ ಹಾಗೂ ಸಿಬಿಐ ವಶದಲ್ಲಿರುವ ಮಾಜಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್​ ಸಿಸೋಡಿಯಾ ಅವರ ಪಾತ್ರದ ಕುರಿತು ಸಲ್ಲಿಸಿರುವ ಸಾಕ್ಷ್ಯಾಧಾರಗಳು ಎಲ್ಲಿವೆ ಎಂದು ಸುಪ್ರೀಂ ಕೋರ್ಟ್​ ಪ್ರಶ್ನಿಸಿದೆ.

    ಮನೀಶ್​ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್​ ಖನ್ನಾ ಹಾಗೂ ನ್ಯಾಯಮೂರ್ತಿ ಎಸ್​.ವಿ.ಎನ್ ಭಟ್ಟಿ ಅವರಿದ್ದ ಪೀಠವೂ ತನಿಖಾ ಸಂಸ್ಥೆಗಳಾದ ಇಡಿ ಹಾಗೂ ಸಿಬಿಐ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದೆ.

    ಇದನ್ನೂ ಓದಿ: ಬಿಜೆಪಿಯೊಂದಿಗಿನ ಮೈತ್ರಿ ಕಡಿತ; ಕೊನೆಗೂ ಮೌನ ಮುರಿದ ಎಐಎಡಿಎಂಕೆ

    ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳು ಎಲ್ಲಿವೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಸೋಡಿಯಾ ಅವರ ಪಾತ್ರ ಏನಿದೆ ಎಂದು ಪ್ರಶ್ನಿಸಿದ ನ್ಯಾಯಾಲಯವು, ಹಣ ಸ್ವೀಕರಿಸಿರುವುದಕ್ಕೆ ಪ್ರಮುಖ ಪುರಾವೆಗಳೇನು ಎಂದು ತನಿಖಾ ಸಂಸ್ಥೆಯನ್ನು ಪ್ರಶ್ನಿಸಿದೆ. ಸಿಸೋಡಿಯಾ ವಿರುದ್ಧ ದಿನೇಶ್​ ಅರೋರಾ ಹೇಳಿಕೆಯನ್ನು ಹೊರತುಪಡಿಸಿದರೆ ಬೇರೆ ಯಾವುದಾದರೂ ಪುರಾವೆಗಳಿದೆಯೇ ಎಂದು ಕೇಳಿದೆ.

    100 ಹಾಗೂ 30 ಕೋಟಿ ರೂಪಾಯಿ ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ಅದಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಈವರೆಗೂ ಸಲ್ಲಿಸಿಲ್ಲ. ಈ ಪ್ರಕರಣದಲ್ಲಿ ಮನೀಶ್​ ಸಿಸೋಡಿಯಾ ಅವರು ಭಾಗಿಯಾಗಿರುವುದು ತೋರುತ್ತಿಲ್ಲ. ಅವರನ್ನು ಏಕೆ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಬಂಧಿಸಲಾಗಿದೆ ಎಂದು ನ್ಯಾಯಾಲಯ ತನಿಖಾ ಸಂಸ್ಥೆಗಳಾದ ಇಡಿ ಹಾಗೂ ಸಿಬಿಐಅನ್ನು ಪ್ರಶ್ನಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts