ನವದೆಹಲಿ: ಕರೊನಾ ವೈರಸ್ ಸೋಂಕು ತಡೆಗಟ್ಟಲು ತ್ವರಿತವಾಗಿ ಲಾಕ್ಡೌನ್ ಘೋಷಿಸುವ ಜತೆಗೆ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಕೋಟ್ಯಂತರ ಬಡವರ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ಕ್ರಮಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರಾಸ್ ಅಧಾನೋಮ್ ಘೆಬ್ರೆಯೆಸಸ್, ಭಾರತದಲ್ಲಿ ಘೋಷಿಸಲಾಗಿರುವ 21 ದಿನಗಳ ಲಾಕ್ಡೌನ್ನಿಂದ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ ರೀತಿ, 1.70 ಲಕ್ಷ ಕೋಟಿ ರೂ. ಪ್ರಧಾನಮಂತ್ರಿ ಬಡವರ ಕಲ್ಯಾಣ ಪ್ಯಾಕೇಜ್ ಘೋಷಿಸಿದ ರೀತಿ ಅಮೋಘ ಎಂದು ಹೇಳಿದ್ದಾರೆ.
ಈ ಯೋಜನೆಯಡಿ ತೊಂದರೆಯಲ್ಲಿರುವ ಬಡವರಿಗೆ ಉಚಿತವಾಗಿ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ. ಮಹಿಳೆಯರ ಖಾತೆಗಳಿಗೆ ನೇರ ಹಣ ವರ್ಗಾವಣೆ ಮತ್ತು ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಿಲಿಂಡರ್ ವಿತರಣೆ ಮಾಡಲು ಅವರು ಕೈಗೊಂಡಿರುವ ಕ್ರಮ ಶ್ಲಾಘನಾರ್ಹ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ವಿಶ್ವದ ಬಹುತೇಕ ರಾಷ್ಟ್ರಗಳು ಕರೊನಾ ವೈರಸ್ ಸೋಂಕು ತಡೆಗಟ್ಟಲು ಲಾಕ್ಡೌನ್ ಘೋಷಿಸಿವೆ. ಇದರಿಂದ ಬಡವರು ತೀವ್ರ ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಭಾರತದಂತೆ ಇತರೆ ರಾಷ್ಟ್ರಗಳ ನಾಯಕರು ಕೂಡ ತಮ್ಮ ರಾಷ್ಟ್ರಗಳ ಬಡಜನರ ನೆರವಿಗೆ ಬರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
‘ನಾಳೆ ಬೆಳಗ್ಗೆ 9ಗಂಟೆಗೆ ದೇಶದ ಜನರಿಗೆ ಒಂದು ವಿಡಿಯೋ ಸಂದೇಶ ನೀಡಲಿದ್ದೇನೆ…’ : ಪ್ರಧಾನಿ ನರೇಂದ್ರ ಮೋದಿ ಟ್ವೀಟ್