ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ, ರಾಜ್ಯದ ನೂತನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತಹೂಲ ರಾಜ್ಯದ ಜನರಲ್ಲಿ ಹೆಚ್ಚಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಕುರ್ಚಿಗಾಗಿ ಕಸರತ್ತು ನಡೆಯುತ್ತಿದೆ. ಇದೆಲ್ಲದರ ನಡುವೆ ಬೆಂಬಲಿಗರು ಮಾತ್ರ ತಮ್ಮ ತಮ್ಮ ನಾಯಕರ ಭಾವಚಿತ್ರ ಬಳಸಿಕೊಂಡು “ರಾಜ್ಯದ ನೂತನ ಮುಖ್ಯಮಂತ್ರಿ”ಗೆ ಶುಭಾಶಯ ಎಂದು ಬ್ಯಾನರ್ ಅಳವಡಿಸುತ್ತಿದ್ದಾರೆ.
ಇದನ್ನೂ ಓದಿ: ಸಿಎಂ ಸ್ಥಾನ ಸಿಗದಿದ್ದರೆ ಸಚಿವ ಸ್ಥಾನವೂ ಬೇಡ: ಡಿಕೆಶಿ ಬಿಗಿ ಪಟ್ಟು, ಕಾಂಗ್ರೆಸ್ ಹೈಕಮಾಂಡ್ ಕಂಗಾಲು
ಸಿದ್ದು-ಡಿಕೆಶಿ ನಡುವೆ ಸಿಎಂ ಸ್ಥಾನಕ್ಕಾಗಿ ಪೈಪೋಟಿ!
ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದರೂ ಡಿಕೆಶಿ, ಬಿಗಿ ಪಟ್ಟು ಹಿಡಿದಿರುವುದರಿಂದ ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನಕ್ಕೆ ಅಸಮಾಧಾನ ಸ್ಫೋಟಗೊಳ್ಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಸದ್ಯ ಕಾಂಗ್ರೆಸ್ ಮುಂದು ಎರಡೂವರೆ ವರ್ಷ ಸಿದ್ದರಾಮಯ್ಯ ಇನ್ನೆರೆಡೂವರೆ ವರ್ಷ ಡಿಕೆಶಿ ಎಂಬ ಸೂತ್ರ ರೆಡಿಯಾಗಿದೆ. ಆದರೆ, ಈ ಸೂತ್ರಕ್ಕೆ ಡಿಕೆಶಿ ಒಪ್ಪಿಗೆ ನೀಡುತ್ತಿಲ್ಲ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಸಿಎಂ ಸ್ಥಾನ ಸಿಗದಿದ್ದರೆ ಸಚಿವ ಸ್ಥಾನವೂ ಬೇಡ ಎಂದು ಡಿಕೆಶಿ ಹೇಳುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯ ಹತ್ಯೆ ಪ್ರಕರಣ | ಆರೋಪಿಗೆ ಯಾವುದೇ ಮಾನಸಿಕ ಸಮಸ್ಯೆಗಳಿಲ್ಲ; ವೈದ್ಯರಿಂದ ಸ್ಪಷ್ಟನೆ
ಪಟ್ಟು ಬಿಡದ ಡಿಕೆಶಿ
ಡಿಕೆಶಿ ಬಿಗಿ ಪಟ್ಟಿಗೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಕಂಗಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರದ್ದೂ ಪಾತ್ರವಿದೆ. ಆದರೆ, ಸಿದ್ದರಾಮಯ್ಯರನ್ನು ಕಡೆಗಣಿಸುವ ಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ಇದೇ ರೀತಿ ಡಿಕೆಶಿ ಪಟ್ಟನ್ನು ಅಲ್ಲಗಳೆಯುವಂತಿಲ್ಲ. ಇದೀಗ ಈ ಕಗ್ಗಂಟ್ಟನ್ನು ಕಾಂಗ್ರೆಸ್ ಹೈಕಮಾಂಡ್ ಹೇಗೆ ಬಗೆಹರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.