ಉಡುಪಿ: ಸಚಿವ ಈಶ್ವರಪ್ಪ ವಿರುದ್ಧ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ವಿಚಾರ ಇದೀಗ ರಾಜಕೀಯ ಹಾಗೂ ಸಾಮಾಜಿಕವಾಗಿ ಭಾರಿ ಚಾಲ್ತಿಯಲ್ಲಿದ್ದು, ಅಷ್ಟಕ್ಕೂ ಸಂತೋಷ್ ಉಡುಪಿಗೆ ಬಂದಿದ್ದೇಕೆ ಎಂಬ ವಿಷಯವೊಂದು ಕುತೂಹಲ ಕೆರಳಿಸಿದೆ.
ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್, ಸ್ನೇಹಿತರೊಂದಿಗೆ ಉಡುಪಿಗೆ ಬಂದು ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಹೋಟೆಲ್ಸ್ ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್ನ ರೂಂ ನಂಬರ್ 207ರಲ್ಲಿ ಸಂತೋಷ್ ಶವವಾಗಿ ಪತ್ತೆಯಾಗಿದ್ದಾರೆ.
ಆದರೆ ಸಂತೋಷ್ ಉಡುಪಿಗೆ ಬಂದಿದ್ದು ಏಕೆ ಎಂಬ ಕುರಿತು ಇದೀಗ ಹಲವರಲ್ಲಿ ಕುತೂಹಲ ಮೂಡಿಸಿದೆ. ಸೋಮವಾರ-ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿ ಪ್ರವಾಸದಲ್ಲಿದ್ದರು. ಈ ಸಂದರ್ಭದಲ್ಲಿ ಸಿಎಂ ಅವರನ್ನು ಭೇಟಿಯಾಗಿ ತಮ್ಮ ಬಾಕಿ ಹಣ ಪಾವತಿ ಕುರಿತು ಬೇಡಿಕೆ ಇಡಲು ಬಂದಿದ್ದರು. ಆದರೆ ಸಿಎಂ ಭೇಟಿ ಸಾಧ್ಯವಾಗದ್ದರಿಂದ ಲಾಡ್ಜ್ನಲ್ಲಿ ತಂಗಿರುವ ಸಾಧ್ಯತೆ ಇದ್ದು, ಬಳಿಕ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಇನ್ನು ಸಂತೋಷ್ ಈ ಹಿಂದೆಯೂ ಬಾಕಿ ಹಣ ಪಾವತಿ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದರು.
ಆಟವಾಡುತ್ತಿದ್ದಾಗ ಮಹಡಿಯಿಂದ ಕೆಳಕ್ಕೆ ಬಿದ್ದು ನಾಲ್ಕು ವರ್ಷದ ಮಗು ಸಾವು!
ರೌಡಿಯ ಹೆಂಡ್ತಿಗೇ ಮೆಸೇಜ್ ಮಾಡ್ತಿದ್ದ ಕಿಡಿಗೇಡಿ!; ಬಳಿಕ ರಸ್ತೆಯಲ್ಲಿದ್ದ ವಾಹನಗಳ ಗಾಜು ಪುಡಿಪುಡಿ..