ಹುಬ್ಬಳಿ: ನೇಹಾ ಹಿರೇಮಠ್ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹೀನಾಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ್ ಕುಟುಂಬಸ್ಥರನ್ನು ‘ಬಿಗ್ ಬಾಸ್’ ಖ್ಯಾತಿಯ ನಟ ಪ್ರಥಮ್ ಭೇಟಿಯಾಗಿ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿಯ ನೇಹಾ ಹತ್ಯೆ ಕೇಸ್: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ
ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಥಮ್, ವಿದ್ಯಾರ್ಥಿನಿ ನೇಹಾ ಹತ್ಯೆ ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಇಡೀ ದೇಶವೇ ದುಃಖ ಪಡುವಂತೆ ಆಗಿದೆ. ಆದರೆ ಸರ್ಕಾರ ಆರೋಪಿ ಮನೆಗೆ ಭದ್ರತೆ ಕೊಟ್ಟಿದ್ದಾರೆ. ಈ ದೇಶದಲ್ಲಿ ಕಸಬ್ಗೆ ರಕ್ಷಣೆ ನೀಡಲಾಗಿತ್ತು ಬಿಡಿ. ನಮಗಂತೂ ನೇಹಾ ಅವರ ಹತ್ಯೆ ತುಂಬ ನೋವು ನೀಡಿದೆ ಎಂದರು.
ನೇಹಾ ಹಿರೇಮಠ್ ನಿಧನದಿಂದ ಚಿತ್ರರಂಗದ ಎಲ್ಲರಿಗೂ ನೋವಾಗಿದೆ. ಪ್ರಹ್ಲಾದ್ ಜೋಶಿ ಅವರೇ ನೀವು 10 ವರ್ಷದಿಂದ ಅಧಿಕಾರದಲ್ಲಿ ಇದ್ದೀರಿ. ಅಂತರ್ ಧರ್ಮೀಯ ವಿವಾಹದ ಬಗ್ಗೆ ಕಠಿಣ ನಿಯಮ ತೆಗೆದುಕೊಂಡು ಬನ್ನಿ’ ಎಂದು ಪ್ರಥಮ್ ಒತ್ತಾಯಿಸಿದರು.
ಹಿಂದೂ ಹುಡುಗಿಯರ ತಂಟೆಗೆ ಬರಬೇಡಿ: ಹಿಂದೂ ಧರ್ಮದ ಹುಡುಗಿಯರನ್ನು ಬೇರೆ ಧರ್ಮದವರು ಮದುವೆ ಆಗಲೇಬಾರದು. ಯಾಕೆ ಆಗಬೇಕು..? ಎಂದು ಪ್ರಶ್ನೆ ಮಾಡಿದ್ದಾರೆ. ಹಿಂದೂ ಹುಡುಗಿಯರ ಜೊತೆ ನೀವು ಲವ್ಯಾಕೆ ಮಾಡುತ್ತೀರಿ..? ಅದರಿಂದಲೇ ತಾನೆ ಇಷ್ಟೆಲ್ಲ ಕ್ರೌರ್ಯ ಆಗುತ್ತಿರುವುದು. ನಿಮ್ಮ ಪಾಡಿಗೆ, ನಿಮ್ಮ ಸಮುದಾಯದವರನ್ನೇ ಮದುವೆ ಆಗಿ. ಹಿಂದೂ ಹುಡುಗಿಯರ ಜೊತೆ ನಿಮಗೆ ಏನು ಕೆಲಸ? ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಇನ್ನೊಮ್ಮೆ ಹಿಂದೂಗಳ ತಂಟೆಗೆ ಬರಬೇಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೋಷಕರಿಗೆ ಕಿವಿಮಾತು ಹೇಳಿದ ಪ್ರಥಮ್, ನಿಮ್ಮ ಮಕ್ಕಳು ಯಾರ ಜೊತೆ ಇರುತ್ತಾರೆ, ಎಲ್ಲಿಗೆ ಹೋಗುತ್ತಾರೆ ಎಂಬುದನ್ನು ಗಮನಿಸಿ. ಅವನು 9 ಸಲ ಚುಚ್ಚಿದ್ದಾನೆ ಎಂದರೆ ಅವನ ಮನಸ್ಥಿತಿ ಎಷ್ಟು ವಿಕೃತ ಆಗಿದೆ ನೋಡಿ. ಈ ವಿಚಾರದಲ್ಲಿ ರಾಜಕೀಯ ಬೇಡ ಎಂದು ಹೇಳಿದ್ದಾರೆ.