More

    ಹಿಂದೂ ಹುಡುಗಿಯರನ್ನು ಲವ್ ​ಯಾಕೆ ಮಾಡ್ತೀರಿ..? ನಿಮ್ಮ ಧರ್ಮದಲ್ಲೇ 5 ಮದುವೆ ಮಾಡಿಕೊಳ್ಳಿ: ಪ್ರಥಮ್​ ಆಕ್ರೋಶ

    ಹುಬ್ಬಳಿ: ನೇಹಾ ಹಿರೇಮಠ್ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹೀನಾಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ್ ಕುಟುಂಬಸ್ಥರನ್ನು ‘ಬಿಗ್ ಬಾಸ್‌’ ಖ್ಯಾತಿಯ ನಟ ಪ್ರಥಮ್ ಭೇಟಿಯಾಗಿ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.

    ಇದನ್ನೂ ಓದಿ: ಹುಬ್ಬಳ್ಳಿಯ ನೇಹಾ ಹತ್ಯೆ ಕೇಸ್​: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ

    ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಥಮ್​, ವಿದ್ಯಾರ್ಥಿನಿ ನೇಹಾ ಹತ್ಯೆ ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಇಡೀ ದೇಶವೇ ದುಃಖ ಪಡುವಂತೆ ಆಗಿದೆ. ಆದರೆ ಸರ್ಕಾರ ಆರೋಪಿ ಮನೆಗೆ ಭದ್ರತೆ ಕೊಟ್ಟಿದ್ದಾರೆ. ಈ ದೇಶದಲ್ಲಿ ಕಸಬ್‌ಗೆ ರಕ್ಷಣೆ ನೀಡಲಾಗಿತ್ತು ಬಿಡಿ. ನಮಗಂತೂ ನೇಹಾ ಅವರ ಹತ್ಯೆ ತುಂಬ ನೋವು ನೀಡಿದೆ ಎಂದರು.

    ನೇಹಾ ಹಿರೇಮಠ್​ ನಿಧನದಿಂದ ಚಿತ್ರರಂಗದ ಎಲ್ಲರಿಗೂ ನೋವಾಗಿದೆ. ಪ್ರಹ್ಲಾದ್​ ಜೋಶಿ ಅವರೇ ನೀವು 10 ವರ್ಷದಿಂದ ಅಧಿಕಾರದಲ್ಲಿ ಇದ್ದೀರಿ. ಅಂತರ್​ ಧರ್ಮೀಯ ವಿವಾಹದ ಬಗ್ಗೆ ಕಠಿಣ ನಿಯಮ ತೆಗೆದುಕೊಂಡು ಬನ್ನಿ’ ಎಂದು ಪ್ರಥಮ್​ ಒತ್ತಾಯಿಸಿದರು.

    ಹಿಂದೂ ಹುಡುಗಿಯರ ತಂಟೆಗೆ ಬರಬೇಡಿ: ಹಿಂದೂ ಧರ್ಮದ ಹುಡುಗಿಯರನ್ನು ಬೇರೆ ಧರ್ಮದವರು ಮದುವೆ ಆಗಲೇಬಾರದು. ಯಾಕೆ ಆಗಬೇಕು..? ಎಂದು ಪ್ರಶ್ನೆ ಮಾಡಿದ್ದಾರೆ. ಹಿಂದೂ ಹುಡುಗಿಯರ ಜೊತೆ ನೀವು ಲವ್​ಯಾಕೆ ಮಾಡುತ್ತೀರಿ..? ಅದರಿಂದಲೇ ತಾನೆ ಇಷ್ಟೆಲ್ಲ ಕ್ರೌರ್ಯ ಆಗುತ್ತಿರುವುದು. ನಿಮ್ಮ ಪಾಡಿಗೆ, ನಿಮ್ಮ ಸಮುದಾಯದವರನ್ನೇ ಮದುವೆ ಆಗಿ. ಹಿಂದೂ ಹುಡುಗಿಯರ ಜೊತೆ ನಿಮಗೆ ಏನು ಕೆಲಸ? ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಇನ್ನೊಮ್ಮೆ ಹಿಂದೂಗಳ ತಂಟೆಗೆ ಬರಬೇಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪೋಷಕರಿಗೆ ಕಿವಿಮಾತು ಹೇಳಿದ ಪ್ರಥಮ್, ನಿಮ್ಮ ಮಕ್ಕಳು ಯಾರ ಜೊತೆ ಇರುತ್ತಾರೆ, ಎಲ್ಲಿಗೆ ಹೋಗುತ್ತಾರೆ ಎಂಬುದನ್ನು ಗಮನಿಸಿ. ಅವನು 9 ಸಲ ಚುಚ್ಚಿದ್ದಾನೆ ಎಂದರೆ ಅವನ ಮನಸ್ಥಿತಿ ಎಷ್ಟು ವಿಕೃತ ಆಗಿದೆ ನೋಡಿ. ಈ ವಿಚಾರದಲ್ಲಿ ರಾಜಕೀಯ ಬೇಡ ಎಂದು ಹೇಳಿದ್ದಾರೆ.

    ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಜೆ.ಪಿ ನಡ್ಡಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts