ಬಸ್ ದರ ಏರಿಸಿದ್ದಕ್ಕೆ ವ್ಯಾಪಕ ಆಕ್ರೋಶ

blank

ನರಗುಂದ: ರಾಜ್ಯ ಸರ್ಕಾರ ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಸಾರ್ವಜನಿಕರು ನಗರದ ಮಾರುಕಟ್ಟೆ ಪ್ರದೇಶದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ರಾಜ್​ಕುಮಾರ ಪ್ರಶಸ್ತಿ ಪುರಸ್ಕೃತ ರಾಘವೇಂದ್ರ ಗುಜಮಾಗಡಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ನೆಪದಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ವಂಚನೆ ಮಾಡಲು ಮುಂದಾಗಿದೆ. ಉಚಿತ ಬಸ್ ಪ್ರಯಾಣದಿಂದ 60 ವರ್ಷದ ಮೇಲ್ಪಟ್ಟ ವಯೋವೃದ್ಧರು, ಶಾಲಾ, ಕಾಲೇಜ್ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಗಳಾಗುತ್ತಿವೆ. ಈ ಬಗ್ಗೆ ಸರ್ಕಾರ ಕೂಡಲೇ ವಿಶೇಷ ಅಧ್ಯಯನ ಕೈಗೊಂಡು ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಪ್ರಯತ್ನಿಸಬೇಕು. ಅಲ್ಲದೆ, ಅಗತ್ಯ ವಸ್ತುಗಳು, ಪೆಟ್ರೋಲ್,ಡೀಸೆಲ್, ಬಸ್ ಪ್ರಯಾಣ ದರ ಏರಿಕೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಮಂಜುನಾಥ ಜಿಂಗಾಡೆ, ಪ್ರಶಾಂತ ಮಹೇಂದ್ರಕರ್, ದಾವಲಸಾಬ್ ಶಿಂದಗಿ, ನಾಗರಾಜ ಪಾರ್ವತಿಯವರ, ಬಸವರಾಜ ಸತ್ತಿಗೇರಿ, ವಾಸುರಡ್ಡಿ ಹೆಬ್ಬಾಳ, ಪೀರು ಜಿಂಗಾಡೆ, ಆನಂದ ಜಿಂಗಾಡೆ, ಕೃಷ್ಣಾ ದಲಬಂಜನ, ಇತರರಿದ್ದರು.

Share This Article

ಪ್ರತಿದಿನ ಹಣೆಗೆ ವಿಭೂತಿ ಹಚ್ಚಿಕೊಂಡರೆ ಏನಾಗುತ್ತದೆ ಗೊತ್ತಾ? significance of vibhuti

significance of vibhuti:  ಸಾಮಾನ್ಯವಾಗಿ ಹಿಂದೂಗಳು ಹಣೆಯ ಮೇಲೆ ಹಚ್ಚೆ ಹಾಕಿಸಿಕೊಂಡಿರುವುದನ್ನು ನೋಡುತ್ತೇವೆ. ಮಹಿಳೆಯರು  ತಿಲಕವನ್ನು…

ಬಿಸಿಲಲ್ಲಿ ಸೆಖೆ ತಾಳಲಾರದೆ ICE ನೀರು ಕುಡಿದ್ರೆ ಜೀವಕ್ಕೆ ಅಪಾಯ ಖಂಡಿತ! Summer Health

Summer Health: ನೀರು ಮನುಷ್ಯರಿಗೆ ಬಹಳ ಅವಶ್ಯಕ. ನಾವು ಅನ್ನ ತಿನ್ನದೆ ಬದುಕಬಹುದು, ಆದರೆ ನೀರು…

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…