More

    ಮುಳುಗುತ್ತಿದ್ದ ಪತ್ನಿಯನ್ನು ರಕ್ಷಿಸಲು ಧಾವಿಸಿದ ಪತಿ; ಇಬ್ಬರೂ ನೀರುಪಾಲು..

    ರಾಮನಗರ: ಒಬ್ಬರ ಜೀವ ಉಳಿಸಲು ಇನ್ನೊಬ್ಬರು ಧಾವಿಸಿ, ಕೊನೆಗೆ ಪತಿ-ಪತ್ನಿ ಇಬ್ಬರೂ ಪ್ರಾಣ ಕಳೆದುಕೊಂಡ ದುರಂತವೊಂದು ಸಂಭವಿಸಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ.

    ಕೂಡ್ಲೂರು ಗ್ರಾಮದ ವೆಂಕಟೇಶ್ (48) ಮತ್ತು ಪಾರ್ವತಮ್ಮ (42) ಸಾವಿಗೀಡಾದ ದಂಪತಿ. ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಗ್ರಾಮದ ಕೆರೆಯೊಂದರಲ್ಲಿ ಇವರಿಬ್ಬರೂ ಮುಳುಗಿ ನೀರುಪಾಲಾಗಿ ಮೃತಪಟ್ಟಿದ್ದಾರೆ.

    ಈ ದಂಪತಿ ಕುರಿಗಳ ಮೈ ತೊಳೆಯಲು ಕೆರೆ ಬಳಿಗೆ ಕರೆದೊಯ್ದಿದ್ದರು. ಈ ಸಂದರ್ಭದಲ್ಲಿ ಪತ್ನಿ ಜಾರಿ ನೀರಲ್ಲಿ ಮುಳುಗಲಾರಂಭಿಸಿದ್ದರು. ಆಕೆಯನ್ನು ರಕ್ಷಿಸಲೆಂದು ಪತಿಯೂ ನೀರಿಗೆ ಧುಮುಕಿದ್ದು, ಬಳಿಕ ಇಬ್ಬರೂ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಶವಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿಳ್ಳೆಕ್ಯಾತ ಎಂದು ಸುಳ್ಳೇ ಹೇಳಿದ್ದ ನಗರಸಭೆ ಸದಸ್ಯೆಯ ಬಂಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts