More

    ಪತಿಯ ಶವದ ಮುಂದೆ ಅಳುತ್ತಲೇ ಪ್ರಾಣಬಿಟ್ಟ ಪತ್ನಿ: ಮಕ್ಕಳಿಬ್ಬರು ಅನಾಥ, ಹಾಸನದಲ್ಲಿ ಹೃದಯವಿದ್ರಾವಕ ಘಟನೆ

    ಹಾಸನ: ಅಳುತ್ತಲೇ ಪತಿಯ ಶವದ ಮುಂದೆ ಪತ್ನಿ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ಇಂದು (ಮೇ.6) ನಡೆದಿದೆ.

    ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ನಿನ್ನೆ (ಮೇ.5) ರಾತ್ರಿ ರವೀಶ್​ ಹೃದಯಾಘಾತದಿಂದ ಮೃತಪಟ್ಟಿದ್ದ. ಇಂದು ಬೆಳಗ್ಗೆ ಪತಿಯ ಶವದ ಮುಂದೆ ಅಳುತ್ತಲೇ ಪತ್ನಿ ಪ್ರಮೀಳಾ ಕೊನೆಯುಸಿರೆಳೆದಿದ್ದಾಳೆ.

    ಇದನ್ನೂ ಓದಿ: ಕೋರ್ಟ್ ಆದೇಶದ ಮೇರೆಗೆ ಈ ಮೂವರು ಇನ್ನು ಮದ್ಯಪಾನ ಮಾಡುವಂತಿಲ್ಲ!

    ಒಂದೆ ದಂಪತಿ ಸಾವಿನಲ್ಲೂ ಒಂದಾದರೆ, ಇನ್ನೊಂದೆಡೆ ದಂಪತಿ ಇಬ್ಬರು ಗಂಡು ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಪಾಲಕರ ಶವಗಳ ಮುಂದೆ ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ. ದಂಪತಿ ಸಾವಿಗೆ ಗ್ರಾಮಸ್ಥರು ಕೂಡ ಕಂಬನಿ ಮಿಡಿದಿದ್ದಾರೆ.

    ಬೇಲೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದಂಪತಿಯ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. (ದಿಗ್ವಿಜಯ ನ್ಯೂಸ್​)

    ಸೆಲ್ಫ್ ಕಿಡ್ನಾಪ್ ಪ್ರಕರಣದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮತ್ತೊಂದು ವಂಚನೆ ಬೆಳಕಿಗೆ?

    ಬೈಕ್​ ಸವಾರಿ ವೇಳೆ ಅಭಿಮಾನಿಯ ಪ್ರಾಣ ಉಳಿಸಿದ ನಟ ಅಜಿತ್! ವಿಡಿಯೋ ವೈರಲ್​

    ನಟ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ; ಸಿಸಿಬಿ ಪೊಲೀಸರಿಂದ ಮಾಜಿ ಆಪ್ತನ ಬಂಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts