More

    ಪತ್ನಿ ನೇಣು ಬಿಗಿದು ಆತ್ಮಹತ್ಯೆ, ಪತಿಗೆ ಹೃದಯಾಘಾತ; ಸಾವಿನಲ್ಲೂ ಒಂದಾದ ಸತಿ-ಪತಿ

    ಮೈಸೂರು: ವಿವೇಕಾನಂದನಗರದಲ್ಲಿ ಶುಕ್ರವಾರ ಆತ್ಮಹತ್ಯೆಗೆ ಶರಣಾದ ಪತ್ನಿಯ ಸಾವಿನ ಸುದ್ದಿ ತಿಳಿದು ಆತಂಕಕ್ಕೆ ಒಳಗಾದ ಪತಿಯೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಸತಿ-ಪತಿ ಸಾವಿನಲ್ಲೂ ಒಂದಾಗಿದ್ದಾರೆ.


    ವಿಜಯಲಕ್ಷ್ಮೀ(52) ಆತ್ಮಹತ್ಯೆಗೆ ಶರಣಾದ ಪತ್ನಿ. ಮಂಜುನಾಥ(58)ಹೃದಯಾಘಾತದಿಂದ ಮೃತಪಟ್ಟ ಪತಿ. ವಿಜಯಲಕ್ಷ್ಮೀ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಯಿಂದ ಗುಣಮುಖರಾಗದ ಕಾರಣ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು.

    ಶುಕ್ರವಾರ ಮಧ್ಯಾಹ್ನ ಪತಿ ಮನೆಗೆ ಬಂದು ಊಟ ಮಾಡಿಕೊಂಡು ಕೆಲಸಕ್ಕೆ ತೆರಳಿದ ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಮನೆಗೆ ವಾಪಸ್ ಬಂದಾಗ ಪತ್ನಿಯ ಅಗಲಿಕೆ ಸುದ್ದಿ ತಿಳಿದ ಪತಿ ಮಂಜುನಾಥ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.


    ಅಶೋಕಪುರಂ ರೈಲ್ವೆ ವರ್ಕ್‌ಶಾಪ್‌ನಲ್ಲಿ ಮಂಜುನಾಥ್ ಸೀನಿಯರ್ ಸೆಕ್ಷನ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಮಗ ಅಮೆರಿಕದಲ್ಲಿ ನೆಲೆಸಿದ್ದರೆ ಮಗಳು ನಗರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts